ಬಂಟ್ವಾಳ (ಕರಾವಳಿ ಟೈಮ್ಸ್) : ಪಶುಸಂಗೋಪನೆ ಇಲಾಖೆ, ಕರ್ನಾಟಕ ಸಹಕಾರ ಕುಕ್ಕುಟ ಮಹಾ ಮಂಡಳಿಯ ಕ್ರಿಯಾ ಯೋಜನೆಯಡಿ ಐದು ಸಾವಿರ ಘಟಕ ವೆಚ್ಚದಡಿಯಲ್ಲಿ ಮಂಗಳೂರು ಕ್ಷೇತ್ರ ಶಾಸಕ ಯು.ಟಿ. ಖಾದರ್ ಅವರ ಶಿಪಾರಸ್ಸಿನಂತೆ ಇರಾ ಗ್ರಾಮದ ಬಡಕುಟುಂಬಗಳ ಆರ್ಥಿಕ ಸಬಲೀಕರಣ ಮತ್ತು ಸಾರ್ವಜನಿಕರಿಗೆ ಪೌಷ್ಠಿಕ ಆಹಾರ ಯೋಜನೆಯಡಿ ಪ್ರತಿ ಫಲಾನುಭವಿಗೆ 38 ಸಂಖ್ಯೆಯ ಆಸೀಲ್ ಕ್ರಾಸ್/ ನಾಟಿ ಕೋಳಿಯಂತೆ 16 ಸಾಮಾನ್ಯ, 4 ಪರಿಶಿಷ್ಠ ಜಾತಿ, 1 ಪರಿಶಿಷ್ಟ ಪಂಗಡ ಸೇರಿದಂತೆ ಒಟ್ಟು 21 ಮಂದಿ ಫಲಾನುಭವಿಗಳಿಗೆ ಉಚಿತವಾಗಿ ಕೋಳಿ ವಿತರಣಾ ಕಾರ್ಯಕ್ರಮ ಇರಾ ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಬಂಟ್ವಾಳ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಇರಾ ಗ್ರಾ.ಪಂ. ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಫಲಾನುಭವಿಗಳಿಗೆ ಕೋಳಿಗಳನ್ನು ವಿತರಿಸಿದರು.
ಈ ಸಂದರ್ಭ ಗ್ರಾ.ಪಂ. ಸದಸ್ಯರುಗಳಾದ ಎಂ.ಬಿ. ಉಮ್ಮರ್, ಮೊಯಿದಿ ಕುಂಞÂ, ಪಾರ್ವತಿ, ಜಾನುವಾರು ಅಭಿವೃದ್ದಿ ಅಧಿಕಾರಿ ಕೃಷ್ಣಮೂರ್ತಿ ಜಿ. ಉಪಸ್ಥಿತರಿದ್ದರು. ಕುಕ್ಕುಟ ಮಹಾಮಂಡಳಿಯ ಸಹಾಯಕ ನಿರ್ದೇಶಕ ಡಾ. ಸುರೇಶ್, ಪಶುವೈದ್ಯಾಧಿಕಾರಿ ಡಾ. ಅವಿನಾಶ್ ಭಟ್ ಇವರು ಫಲಾನುಭವಿಗಳಿಗೆ ಕೋಳಿ ಸಾಕಾಣಿಕೆ ಬಗ್ಗೆ ಮಾಹಿತಿ ನೀಡಿದರು.
ಜಾಹೀರಾತುಗಳು
0 comments:
Post a Comment