ಬೆಂಗಳೂರು, ಡಿ 17, 2020 (ಕರಾವಳಿ ಟೈಮ್ಸ್) : ಸರಕಾರಿ ಸೇವೆಯು ಸಾರ್ವಜನಿಕ ಸೇವೆಯಾಗಿದ್ದು, ಈ ನಿಟ್ಟಿನಲ್ಲಿ ತಮ್ಮ ಸಮಸ್ಯೆ ಕುರಿತು ವ್ಯವಹರಿಸಲು ಸರಕಾರಿ ಕಛೇರಿಗೆ ಬರುವ ಸಾರ್ವಜನಿಕರೊಂದಿಗೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರೊಂದಿಗೆ ಸೌಜನ್ಯ ಹಾಗೂ ಸಮಾಧಾನದಿಂದ ವರ್ತಿಸುವಂತೆ ರಾಜ್ಯ ಸರಕಾರ ಸರಕಾರಿ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸುತ್ತೋಲೆ ಹೊರಡಿಸುವ ಮೂಲಕ ಸೂಚಿಸಿದೆ.
ಈ ಬಗ್ಗೆ ರಾಜ್ಯ ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಆ-ಸು ತಪಾಸಣೆ) ಇಲಾಖೆಯ ಅಧೀನ ಕಾರ್ಯದರ್ಶಿ ಎಚ್ ಸಿ ಹರ್ಷರಾಣಿ ಸುತ್ತೋಲೆ ಹೊರಡಿಸಿದ್ದು, ಕಛೇರಿಗಳಿಗೆ ತಮ್ಮ ಸೇವೆ ಅರಸಿ ಬರುವ ಸಾರ್ವಜನಿಕರೊಂದಿಗೆ ಅಧಿಕಾರಿ-ಸಿಬ್ಬಂದಿಗಳು ತಾರತಮ್ಯ ನೀತಿ ಅನುಸರಿಸದೆ ಬಂದವರೆಲ್ಲರಿಗೂ ಕುರ್ಚಿಗಳಲ್ಲಿ ಕುಳಿತುಕೊಳ್ಳಲು ಹೇಳುವಂತೆ ಸುತ್ತೋಲೆಯಲ್ಲಿ ಸೂಚಿಸಿದ್ದಾರೆ.
0 comments:
Post a Comment