ನಾಮಪತ್ರ ಸಲ್ಲಿಕೆ ಪೂರ್ವಭಾವಿಯಾಗಿ ರಮಾನಾಥ ರೈ ಟೆಂಪಲ್ ರನ್ : ಜಿಲ್ಲೆಯ ವಿವಿಧ ಧರ್ಮಗಳ ಧಾರ್ಮಿಕ ಕ್ಷೇತ್ರಗಳ ಭೇಟಿ - Karavali Times ನಾಮಪತ್ರ ಸಲ್ಲಿಕೆ ಪೂರ್ವಭಾವಿಯಾಗಿ ರಮಾನಾಥ ರೈ ಟೆಂಪಲ್ ರನ್ : ಜಿಲ್ಲೆಯ ವಿವಿಧ ಧರ್ಮಗಳ ಧಾರ್ಮಿಕ ಕ್ಷೇತ್ರಗಳ ಭೇಟಿ - Karavali Times

728x90

18 April 2023

ನಾಮಪತ್ರ ಸಲ್ಲಿಕೆ ಪೂರ್ವಭಾವಿಯಾಗಿ ರಮಾನಾಥ ರೈ ಟೆಂಪಲ್ ರನ್ : ಜಿಲ್ಲೆಯ ವಿವಿಧ ಧರ್ಮಗಳ ಧಾರ್ಮಿಕ ಕ್ಷೇತ್ರಗಳ ಭೇಟಿ

ಮಂಗಳೂರು, ಎಪ್ರಿಲ್ 19, 2023 (ಕರಾವಳಿ ಟೈಮ್ಸ್) : ರಾಜ್ಯ ವಿಧಾನಸಭಾ ಚುನಾವಣೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ ರಮಾನಾಥ ರೈ ಅವರು ಮಂಗಳವಾರ ವಿವಿಧ ಧರ್ಮಗಳ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. 

ಕೊಲ್ಲೂರು ಮುಕಾಂಬಿಕೆ ದೇವಸ್ಥಾನ, ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ, ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತದ ಬಿಷಪ್, ಬಂದರು ಕೇಂದ್ರ ಜುಮ್ಮಾ ಮಸೀದಿ ದರ್ಗಾಕ್ಕೆ ಭೇಟಿ ನೀಡಿ ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭ ಮೋಹನ್ ಚಂದ್ರ ನಂಬಿಯಾರ್, ಕುದ್ರೋಳಿ ದೇವಸ್ಥಾನದ ಧರ್ಮದರ್ಶಿ ಸಾಯಿರಾಮ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧೀರಜ್ ಪಾಲ್, ಕು ಅಪ್ಪಿ, ವಿಶ್ವಾಸ್ ಕುಮಾರ್ ದಾಸ್, ಶಶಿಧರ್ ಹೆಗ್ಡೆ,

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಮಂಗಳೂರು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ನವೀನ್ ಆರ್ ಡಿಸೋಜ, ಕಾಪೆರ್Çರೇಟರ್ ಗಳಾದ ವಿನಯ್ ರಾಜ್, ಶಶಿಧರ್ ಹೆಗ್ಡೆ, ಕೆಪಿಸಿಸಿ ಸದಸ್ಯ ಪಿಯೂಸ್ ಎಲ್ ರೋಡ್ರಿಗಸ್, ಮಾಜಿ ಕಾಪೆರ್Çರೇಟರ್ ಸಬೀತಾ ಮಿಸ್ಕಿತ್, ಮಾಜಿ ಮೇಯರ್ ಅಶ್ರಫ್, ಕಾಪೆರ್Çರೇಟರ್ ಸಂಶುದ್ದಿನ್ ರವೂಫ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಬ್ಬೀರ್ ಸಿದ್ದಕಟ್ಟೆ, ಅಲ್ವಿನ್ ಪ್ರಕಾಶ್, ಸಿ ಎಂ ಮುಸ್ತಫಾ, ಅಸ್ಲಾಂ ಮೊದಲಾದವರು ಜೊತೆಗಿದ್ದರು. 

ಎಪ್ರಿಲ್ 20 ರಂದು ಗುರುವಾರ ಬಂಟ್ವಾಳದಲ್ಲಿ ರಮಾನಾಥ ರೈ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಗೆಲುವಿಗೆ ಪ್ರಾರ್ಥಿಸಿ ಸರ್ವ ಧರ್ಮಗಳ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಇನ್ನುಳಿದಂತೆ ಸ್ಥಳೀಯ ಧಾರ್ಮಿಕ ಕ್ಷೇತ್ರಗಳಿಗೆ ಗುರುವಾರ ಮುಂಜಾನೆ ಅವರು ಭೇಟಿ ನೀಡಲಿದ್ದು, ಬಳಿಕ ಬೆಳಿಗ್ಗೆ 9 ಗಂಟೆಯಿಂದ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಳದಿಂದ ಮೆರವಣಿಗೆಯಲ್ಲಿ ಸಾಗಿ 12:35ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ನಾಮಪತ್ರ ಸಲ್ಲಿಕೆ ಪೂರ್ವಭಾವಿಯಾಗಿ ರಮಾನಾಥ ರೈ ಟೆಂಪಲ್ ರನ್ : ಜಿಲ್ಲೆಯ ವಿವಿಧ ಧರ್ಮಗಳ ಧಾರ್ಮಿಕ ಕ್ಷೇತ್ರಗಳ ಭೇಟಿ Rating: 5 Reviewed By: karavali Times
Scroll to Top