ಗೋಳ್ತಮಜಲು : ಅಕ್ರಮ ಜಾನುವಾರು ಸಾಗಾಟ ಪತ್ತೆ ಹಚ್ಚಿದ ಬಂಟ್ವಾಳ ನಗರ ಪೊಲೀಸರು, ಜಾನುವಾರು ಸಹಿತ ಇಬ್ಬರ ದಸ್ತಗಿರಿ - Karavali Times ಗೋಳ್ತಮಜಲು : ಅಕ್ರಮ ಜಾನುವಾರು ಸಾಗಾಟ ಪತ್ತೆ ಹಚ್ಚಿದ ಬಂಟ್ವಾಳ ನಗರ ಪೊಲೀಸರು, ಜಾನುವಾರು ಸಹಿತ ಇಬ್ಬರ ದಸ್ತಗಿರಿ - Karavali Times

728x90

4 May 2023

ಗೋಳ್ತಮಜಲು : ಅಕ್ರಮ ಜಾನುವಾರು ಸಾಗಾಟ ಪತ್ತೆ ಹಚ್ಚಿದ ಬಂಟ್ವಾಳ ನಗರ ಪೊಲೀಸರು, ಜಾನುವಾರು ಸಹಿತ ಇಬ್ಬರ ದಸ್ತಗಿರಿ

ಬಂಟ್ವಾಳ, ಮೇ 04, 2023 (ಕರಾವಳಿ ಟೈಮ್ಸ್) : ಗೋಳ್ತಮಜಲು ಗ್ರಾಮದ ಗಣೇಶನಗರ ಎಂಬಲ್ಲಿ ಗುರುವಾರ ಮಧ್ಯಾಹ್ನ ಅಕ್ರಮ ಜಾನುವಾರು ಸಾಗಾಟ ಪ್ರಕರಣ ಪತ್ತೆ ಹಚ್ಚಿದ ಬಂಟ್ವಾಳ ನಗರ ಠಾಣಾ ಪಿಎಸ್ಸೈ ರಾಮಕೃಷ್ಣ ನೇತೃತ್ವದ ಪೊಲೀಸರು ಜಾನುವಾರು ಸಹಿತ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ. 

ಬಂಧಿತ ಆರೋಪಿಗಳನ್ನು ಪುದು ಗ್ರಾಮದ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಶಾಲಾ ಬಳಿ ನಿವಾಸಿ ದಿವಂಗತ ಕೆ ಮೊಹಮ್ಮದ್ ಅವರ ಪುತ್ರ ಬಶೀರ್ ಕೆ (32) ಹಾಗೂ ಮಂಗಿಲಪದವು ಸಮೀಪದ ಒಕ್ಕೆತ್ತೂರು ನಿವಾಸಿ ಡೆನ್ನಿಸ್ ಮಸ್ಕರೇನಸ್ ಅವರ ಪುತ್ರ ಜೆರಾಲ್ಡ್ ಮಸ್ಕರೇನಸ್ (48) ಎಂದು ಹೆಸರಿಸಲಾಗಿದೆ. 

ಬಂಟ್ವಾಳ ನಗರ ಠಾಣಾ ಪೊಲೀಸರು ಗುರುವಾರ ಬೆಳಿಗ್ಗೆ ಗೋಳ್ತಮಜಲು ಗ್ರಾಮದ ಗಣೇಶನಗರದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ವಿಟ್ಲ ಕಡೆಯಿಂದ ಬರುತ್ತಿದ್ದ ಟೆಂಪೋ ಪಿಕಪ್ ವಾಹನವನ್ನು ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ. 

ಕಾರ್ಯಾಚರಣೆ ವೇಳೆ 13 ಸಾವಿರ ರೂಪಾಯಿ ಮೌಲ್ಯದ ದನ, 3 ಸಾವಿರ ರೂಪಾಯಿ ಮೌಲ್ಯದ ಕರು ಹಾಗೂ ಸುಮಾರು 75 ಸಾವಿರ ರೂಪಾಯಿ ಮೌಲ್ಯದ ಟೆಂಪೋ ಪಿಕಪ್ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಗೋಳ್ತಮಜಲು : ಅಕ್ರಮ ಜಾನುವಾರು ಸಾಗಾಟ ಪತ್ತೆ ಹಚ್ಚಿದ ಬಂಟ್ವಾಳ ನಗರ ಪೊಲೀಸರು, ಜಾನುವಾರು ಸಹಿತ ಇಬ್ಬರ ದಸ್ತಗಿರಿ Rating: 5 Reviewed By: karavali Times
Scroll to Top