ಪ್ರೀತಿಸಿದ ಮಹಿಳೆ ಕರೆ ಸ್ವೀಕರಿಸದೆ ತಾತ್ಸಾರ ಹಾಗೂ ಪತಿ ಗುಂಪುಕಟ್ಟಿ ಹಲ್ಲೆ ನಡೆಸಿದ ಹಿನ್ನಲೆ ಅವಮಾನಗೊಂಡ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ - Karavali Times ಪ್ರೀತಿಸಿದ ಮಹಿಳೆ ಕರೆ ಸ್ವೀಕರಿಸದೆ ತಾತ್ಸಾರ ಹಾಗೂ ಪತಿ ಗುಂಪುಕಟ್ಟಿ ಹಲ್ಲೆ ನಡೆಸಿದ ಹಿನ್ನಲೆ ಅವಮಾನಗೊಂಡ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ - Karavali Times

728x90

24 August 2023

ಪ್ರೀತಿಸಿದ ಮಹಿಳೆ ಕರೆ ಸ್ವೀಕರಿಸದೆ ತಾತ್ಸಾರ ಹಾಗೂ ಪತಿ ಗುಂಪುಕಟ್ಟಿ ಹಲ್ಲೆ ನಡೆಸಿದ ಹಿನ್ನಲೆ ಅವಮಾನಗೊಂಡ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಬೆಳ್ಳಾರೆ, ಆಗಸ್ಟ್ 24, 2023 (ಕರಾವಳಿ ಟೈಮ್ಸ್) : ಪ್ರೀತಿಸಿದ ಮಹಿಳೆ ಕರೆ ಸ್ವೀಕರಿಸದೆ ತಾತ್ಸಾರ ತೋರಿದ ಹಾಗೂ ಮಹಿಳೆಯ ಪತಿ ಗುಂಪು ಸೇರಿಸಿಕೊಂಡು ಹಲ್ಲೆ ನಡೆಸಿದ್ದರಿಂದ ಅವಮಾನಗೊಂಡ ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. 

ಪುತ್ತೂರು ತಾಲೂಕು, ಕೆದಂಬಾಡಿ ಗ್ರಾಮದ ನಿವಾಸಿ ಅಬ್ದುಲ್ ನಾಸಿರ್ (28) ಎಂಬಾತನೇ ಅವಮಾನಗೊಂಡು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ನಾಸಿರ್ ಆ 17 ರಂದು ರಾತ್ರಿ ಬೆಳ್ಳಾರೆ ಗ್ರಾಮದ ನಿವಾಸಿ ಅದ್ರಾಮ ಎಂಬವರ ಮಗಳ ಚಿಕಿತ್ಸೆಗಾಗಿ ಅವರ ಕಾರಿನಲ್ಲಿ ಚಾಲಕನಾಗಿ ಅದ್ರಾಮರವರ ಪತ್ನಿ ಹಾಗೂ ಮಗಳೊಂದಿಗೆ ಆಸ್ಪತ್ರೆಗೆ ಹೋಗಿ ವಾಪಾಸ್ಸು ಮನೆಗೆ ಅವರನ್ನು ಬಿಟ್ಟು ವಾಪಾಸು ನಾಸಿರ್ ತನ್ನ ಮನೆಗೆ ತೆರಳುತ್ತಿದ್ದಾಗ ಆರೋಪಿಗಳಾದ ಅದ್ರಾಮ ಹಾಗೂ ಮೊಯ್ದು, ತಾಜು, ಅಬ್ದುಲ್ಲಾ, ಸಮೀರ್ ಮತ್ತು ಇತರರು ಸೇರಿ ಅದ್ರಾಮರವರ ಪತ್ನಿಯನ್ನು ಪ್ರೀತಿಸುತ್ತಿರುವ ಹಿನ್ನೆಲೆಯಲ್ಲಿ ತಗಾದೆ ತೆಗೆದು ನಾಸಿರ್ ಅವರನ್ನು ತಡೆದು ನಿಲ್ಲಿಸಿ ಕೈಯಿಂದ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿ ಪುತ್ತೂರಿನ ಕೂರ್ನಡ್ಕ ಎಂಬಲ್ಲಿ  ಕಾರಿನಿಂದ ಇಳಿಸಿ ಹೋಗಿರುತ್ತಾರೆ. 

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಸಿರ್ ತಾನು ಪ್ರೀತಿಸುತ್ತಿರುವ ಅದ್ರಾಮರವರ ಪತ್ನಿಯು ತನ್ನ ದೂರವಾಣಿ ಕರೆ ಸ್ವೀಕರಿಸದೇ ತಾತ್ಸಾರ ಮಾಡುತ್ತಿರುವುದರಿಂದ ಹಾಗೂ ಆರೋಪಿಗಳಾದ ಅದ್ರಾಮ ಮತ್ತು ಇತರರು ಹಲ್ಲೆ ಮಾಡಿರುವುದರಿಂದ ಅವಮಾನಗೊಂಡು ಬುಧವಾರ (ಆಗಸ್ಟ್ 22) ಪುತ್ತೂರು-ಸಂಟ್ಯಾರಿನ ಸಮೀಪ ಕಟ್ಟತ್ತಾರು ಎಂಬಲ್ಲಿ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಹೈಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೆಳ್ಳಾರೆ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 55/2023 ಕಲಂ 341, 323,  506 ಜೊತೆಗೆ 149 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಪ್ರೀತಿಸಿದ ಮಹಿಳೆ ಕರೆ ಸ್ವೀಕರಿಸದೆ ತಾತ್ಸಾರ ಹಾಗೂ ಪತಿ ಗುಂಪುಕಟ್ಟಿ ಹಲ್ಲೆ ನಡೆಸಿದ ಹಿನ್ನಲೆ ಅವಮಾನಗೊಂಡ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ Rating: 5 Reviewed By: karavali Times
Scroll to Top