ಕುಲಾಲ ಸೇವಾದಳದ ಶ್ರೀಕೃಷ್ಣ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ - Karavali Times ಕುಲಾಲ ಸೇವಾದಳದ ಶ್ರೀಕೃಷ್ಣ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ - Karavali Times

728x90

26 August 2023

ಕುಲಾಲ ಸೇವಾದಳದ ಶ್ರೀಕೃಷ್ಣ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ, ಆಗಸ್ಟ್ 26, 2023 (ಕರಾವಳಿ ಟೈಮ್ಸ್) :  ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧೀನದಲ್ಲಿರುವ ಕುಲಾಲ ಸೇವಾದಳದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಮಕ್ಕಳ ಕೃಷ್ಣ ವೇಷ ಸ್ಪರ್ಧೆಯ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಶುಕ್ರವಾರ ಬಿ ಸಿ ರೋಡಿನ ರಕ್ತೇಶ್ವರಿ ದೇವಸ್ಥಾನದಲ್ಲಿ ನಡೆಯಿತು.

ಅಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಸಂಘದ ಅಧ್ಯಕ್ಷ ರಾಧಾಕೃಷ್ಣ ಬಂಟ್ವಾಳ ಅವರು ಕುಲಾಲ ಸಮಾಜದ ಬಾಂಧವರಿಗೆ ಸೇವಾದಳದ ಮೂಲಕ ಉತ್ತಮ ಕಾರ್ಯಕ್ರಮಗಳು ಮೂಡಿಬರಲಿ ಎಂದು ಹಾರೈಸಿದರು. 

ಈ ಸಂದರ್ಭ ಸಮಾಜದ ಹಿರಿಯರಾದ ಕೃಷ್ಣಪ್ಪ ಸಾಲ್ಯಾನ್, ಕಾರ್ಯಕಾರಿ ಸಮಿತಿ ಸದಸ್ಯರಾದ ಮಚ್ಚೇಂದ್ರ ಸಾಲ್ಯಾನ್, ಕೋಶಾಧಿಕಾರಿ ರಮೇಶ್ ಸಾಲ್ಯಾನ್, ಮೀನಾಕ್ಷಿ ಪದ್ಮನಾಭ, ಗಣೇಶ್ ಮರ್ದೊಳಿ, ಕುಲಾಲ ಸೇವಾದಳದ ದಳಪತಿ ರಾಜೇಶ್ ಕುಮಾರ್, ಕಾರ್ಯದರ್ಶಿ ಜಯಂತ ಅಗ್ರಬೈಲು, ಸಾಂಸ್ಕೃತಿಕ ಕಾರ್ಯದರ್ಶಿಗಳಾದ ರಾಜೇಶ್ ಭಂಡಾರಿಬೆಟ್ಟು, ಗಣೇಶ್ ಕುಲಾಲ್ ಬೆದ್ರಗುಡ್ಡೆ, ಮಹಿಳಾ ಘಟಕದ ಅಧ್ಯಕ್ಷೆ ಮಾಲತಿ ಮಚ್ಚೇಂದ್ರ, ನಮಿತಾ ಉಮೇಶ್, ಸುಶೀಲಾ ಲಿಂಗಪ್ಪ, ಪ್ರೇಮ ಜನಾರ್ದನ, ರೂಪಾ, ವಾರಿಜಾ, ಆಶಾಗಿರಿಧರ್, ಪ್ರಭಾವತಿ, ನಳಿನಿ ರಮೇಶ್, ಪ್ರಭಾವತಿ ಮೊದಲಾದವರು ಉಪಸ್ಥಿತರಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಕುಲಾಲ ಸೇವಾದಳದ ಶ್ರೀಕೃಷ್ಣ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ Rating: 5 Reviewed By: karavali Times
Scroll to Top