ಉದ್ಯಮಿಗೆ ಕೋಟ್ಯಂತ ರೂಪಾಯಿ ವಂಚಿಸಿದ ಪ್ರಕರಣ : ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸಿಸಿಬಿ ಬಲೆಗೆ - Karavali Times ಉದ್ಯಮಿಗೆ ಕೋಟ್ಯಂತ ರೂಪಾಯಿ ವಂಚಿಸಿದ ಪ್ರಕರಣ : ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸಿಸಿಬಿ ಬಲೆಗೆ - Karavali Times

728x90

13 September 2023

ಉದ್ಯಮಿಗೆ ಕೋಟ್ಯಂತ ರೂಪಾಯಿ ವಂಚಿಸಿದ ಪ್ರಕರಣ : ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸಿಸಿಬಿ ಬಲೆಗೆ

ಬೆಂಗಳೂರು, ಸೆಪ್ಟೆಂಬರ್ 13, 2023 (ಕರಾವಳಿ ಟೈಮ್ಸ್) : ಉದ್ಯಮಿಯೋರ್ವರಿಗೆ ಚುನಾವಣಾ ಟಿಕೆಟ್ ನೀಡುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವಳನ್ನು ಬೆಂಗಳೂರು ಸಿಸಿಬಿ ಪೆÇಲೀಸರು ಬುಧವಾರ ಬಂಧಿಸಿದ್ದಾರೆ. 

ಉದ್ಯಮಿಯೊಬ್ಬರಿಗೆ ಕಳೆದ ವಿಧಾನಸಭೆ ಚುನಾವಣೆ ವೇಳೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿ ಗೋವಿಂದಬಾಬು ಪೂಜಾರಿ ಎಂಬವರಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿರುವ ಆರೋಪ ಚೈತ್ರಾ ವಿರುದ್ಧ ಕೇಳಿಬಂದಿದೆ. 

ಚೈತ್ರಾ ಕುಂದಾಪುರ ಗೋವಿಂದಬಾಬು ಪೂಜಾರಿ ಎಂಬವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ಹೇಳಿದ್ದರು. ಇದನ್ನು ನಂಬಿದ ಗೋವಿಂದಬಾಬು ಪೂಜಾರಿಯವರು ಚೈತ್ರಾ ಕುಂದಾಪುರ ಹೇಳಿದಂತೆ ಆಗಾಗ ಬೆಂಗಳೂರಿಗೆ ಬರುತ್ತಿದ್ದರು. ಇಲ್ಲಿ ಚೈತ್ರಾ ಕುಂದಾಪುರ ಕೆಲವರನ್ನು ತೋರಿಸಿ ಇವರಿಗೆ ಹೈಕಮಾಂಡ್ ನಾಯಕರ ಜೊತೆ ನಿಕಟ ಸಂಪರ್ಕವಿದ್ದು, ಇವರು ಹೇಳಿದರೆ ಟಿಕೆಟ್ ಕೊಡಿಸುತ್ತಾರೆ ಎಂದು ಮಾತಿನ ಮೂಲಕ ನಂಬಿಸಿದ್ದರು ಎನ್ನಲಾಗಿದೆ. ಚೈತ್ರಾ ಮಾತನ್ನು ನಂಬಿದ ಗೋವಿಂದಬಾಬು ಪೂಜಾರಿ ಅವರು ಚೈತ್ರಾ ಕೇಳಿದಷ್ಟು ಹಣ ಕೊಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಗೋವಿಂದಬಾಬು ಅವರ ಬಳಿಯಿಂದ ಚೈತ್ರಾ ಕುಂದಾಪುರ ಒಟ್ಟು 4 ಕೋಟಿ ರೂಪಾಯಿ ಹಣ ಪಡೆದಿದ್ದರು. ಆದರೆ ಗೋವಿಂದಬಾಬು ಪೂಜಾರಿ ಅವರಿಗೆ ಟಿಕೆಟ್ ಸಿಗಲಿಲ್ಲ. ಬಳಿಕ ಗೋವಿಂದಬಾಬು ಕೊಟ್ಟ ಹಣವನ್ನು ವಾಪಸ್ಸು ಕೇಳಿದ್ದಾರೆ. ಆದರೆ ಚೈತ್ರಾ ಕುಂದಾಪುರ ಹಣ ನೀಡದೇ ವಂಚಿಸಿದ್ದಾರೆ ಎಂದು ಗೋವಿಂದಬಾಬು ಪೂಜಾರಿ ಅವರು ದೂರು ದಾಖಲಿಸಿದ್ದಾರೆ. 

ಗೋವಿಂದಬಾಬು ಪೂಜಾರಿ ದೂರಿನ ಆಧಾರದ ಮೇಲೆ ಸದ್ಯ ಸಿಸಿಬಿ ಪೆÇಲೀಸರು ಚೈತ್ರಾ ಕುಂದಾಪುರ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಉದ್ಯಮಿಗೆ ಕೋಟ್ಯಂತ ರೂಪಾಯಿ ವಂಚಿಸಿದ ಪ್ರಕರಣ : ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸಿಸಿಬಿ ಬಲೆಗೆ Rating: 5 Reviewed By: karavali Times
Scroll to Top