ಉಪ್ಪಿನಂಗಡಿ, ಸೆಪ್ಟೆಂಬರ್ 16, 2023 (ಕರಾವಳಿ ಟೈಮ್ಸ್) : ಇಲ್ಲಿಗೆ ಸಮೀಪದ ನೆಕ್ಕಿಲಾಡಿ ಎಂಬಲ್ಲಿ ಶುಕ್ರವಾರ ಸಂಜೆ ಗಾಂಜಾ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಆರೋಪಿಯೋರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕು ಕರಾಯ ನಿವಾಸಿ ವೆಂಕಟೇಶ (32) ಎಂದು ಹೆಸರಿಸಲಾಗಿದೆ. ನೆಕ್ಕಿಲಾಡಿ ಬಸ್ಸು ನಿಲ್ದಾಣದ ಬಳಿ ವ್ಯಕ್ತಿಯೊಬ್ಬ ಅಮಲು ಸೇವನೆ ಮಾಡಿ ಅನುಚಿತವಾಗಿ ವರ್ತಿಸುತ್ತಿರುವುದನ್ನು ಕಂಡು ಉಪ್ಪಿನಂಗಡಿ ಪೊಲೀಸರು ವಿಚಾರಿಸಿದಾಗ ಆತನು ಮಾದಕ ದ್ರವ್ಯವನ್ನು ಸೇವಿಸಿದ ಬಗ್ಗೆ ಘಾಟು ವಾಸನೆ ಕಂಡು ಬಂದ ಹಿನ್ನೆಲೆಯಲ್ಲಿ, ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
0 comments:
Post a Comment