ಬೆಳ್ತಂಗಡಿ : ಸರಕಾರಿ ಜಮೀನು ಒತ್ತುವರಿ ಬಗ್ಗೆ ಸ್ಥಳ ಪರಿಶೀಲನೆಗೆ ತೆರಳಿದ ತಹಶೀಲ್ದಾರ್ ಸಹಿತ ಕಂದಾಯ ಇಲಾಖಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ, ಹಲ್ಲೆಗೆ ಯತ್ನ, ದೂರು ದಾಖಲು - Karavali Times ಬೆಳ್ತಂಗಡಿ : ಸರಕಾರಿ ಜಮೀನು ಒತ್ತುವರಿ ಬಗ್ಗೆ ಸ್ಥಳ ಪರಿಶೀಲನೆಗೆ ತೆರಳಿದ ತಹಶೀಲ್ದಾರ್ ಸಹಿತ ಕಂದಾಯ ಇಲಾಖಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ, ಹಲ್ಲೆಗೆ ಯತ್ನ, ದೂರು ದಾಖಲು - Karavali Times

728x90

20 January 2024

ಬೆಳ್ತಂಗಡಿ : ಸರಕಾರಿ ಜಮೀನು ಒತ್ತುವರಿ ಬಗ್ಗೆ ಸ್ಥಳ ಪರಿಶೀಲನೆಗೆ ತೆರಳಿದ ತಹಶೀಲ್ದಾರ್ ಸಹಿತ ಕಂದಾಯ ಇಲಾಖಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ, ಹಲ್ಲೆಗೆ ಯತ್ನ, ದೂರು ದಾಖಲು

ಬೆಳ್ತಂಗಡಿ, ಜನವರಿ 20, 2024 (ಕರಾವಳಿ ಟೈಮ್ಸ್) : ಸರಕಾರಿ ಜಾಗ ಒತ್ತುವರಿ ಪ್ರಕರಣ ಪರಿಶೀಲನೆಗೆ ಸ್ಥಳಕ್ಕೆ ತೆರಳಿದ ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಸಹಿತ ಕಂದಾಯ ಇಲಾಖಾಧಿಕಾರಿಗಳ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಗೆ ಯತ್ನಿಸಿದ ಘಟನೆ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ಗುರುವಾರ ನಡೆದಿದ್ದು, ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಬೆಳ್ತಂಗಡಿ ತಾಲೂಕು ತಹಶಿಲ್ದಾರ್ ಪೃಥ್ವಿ ಸಾನಿಕಂ ಅವರು ಗುರುವಾರ (ಜನವರಿ 18) ರಂದು ಬೆಳಿಗ್ಗೆ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ಸರಕಾರಿ ಜಾಗದ ಒತ್ತುವರಿಯಾಗಿರುವ ಬಗ್ಗೆ ಪರಿಶೀಲನೆಗಾಗಿ ಕಂದಾಯ ನಿರೀಕ್ಷಕರು, ಗ್ರಾಮ ಅಭಿವೃದ್ದಿ ಅಧಿಕಾರಿಯವರೊಂದಿಗೆ ಸ್ಥಳಕ್ಕೆ ತೆರಳಿದಾಗ, ಸದ್ರಿ ಸ್ಥಳವನ್ನು ಒತ್ತುವರಿಸಿದ ನಸೀರ್ ಮತ್ತು ರೌಫ್ ಎಂಬವರುಗಳು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಮಾಡಲು ಪ್ರಯತ್ನಿಸಿದ್ದಾರೆ. ಸ್ಥಳದಲ್ಲಿದ್ದ ಕಂದಾಯ ನಿರೀಕ್ಷಕರಿಗೆ ಅವಾಚ್ಯ ಶಬ್ದಗಳಿಂದ ಬೈದು ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ಉಂಟು ಮಾಡಿರುತ್ತಾರೆ ಎಂಬುದಾಗಿ ತಹಶೀಲ್ದಾರ್ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 03/2024 ಕಲಂ 353, 504 ಐಪಿಸಿಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಬೆಳ್ತಂಗಡಿ : ಸರಕಾರಿ ಜಮೀನು ಒತ್ತುವರಿ ಬಗ್ಗೆ ಸ್ಥಳ ಪರಿಶೀಲನೆಗೆ ತೆರಳಿದ ತಹಶೀಲ್ದಾರ್ ಸಹಿತ ಕಂದಾಯ ಇಲಾಖಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ, ಹಲ್ಲೆಗೆ ಯತ್ನ, ದೂರು ದಾಖಲು Rating: 5 Reviewed By: karavali Times
Scroll to Top