ಬಂಟ್ವಾಳ : ವಿಶ್ವ ಬಾಲಕಾರ್ಮಿಕ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾ ವಿಧಿ ಬೋಧನೆ - Karavali Times ಬಂಟ್ವಾಳ : ವಿಶ್ವ ಬಾಲಕಾರ್ಮಿಕ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾ ವಿಧಿ ಬೋಧನೆ - Karavali Times

728x90

12 June 2024

ಬಂಟ್ವಾಳ : ವಿಶ್ವ ಬಾಲಕಾರ್ಮಿಕ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾ ವಿಧಿ ಬೋಧನೆ

ಬಂಟ್ವಾಳ, ಜೂನ್ 12, 2024 (ಕರಾವಳಿ ಟೈಮ್ಸ್) : ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯ ಅಂಗವಾಗಿ ಬುಧವಾರ ಬಂಟ್ವಾಳ ಆಡಳಿತ ಸೌಧದಲ್ಲಿ ತಾಲೂಕು ಕಚೇರಿಯ ಎಲ್ಲಾ ಸಿಬ್ಬಂದಿಗಳಿಗೆ ತಹಶೀಲ್ದಾರ್ ಡಿ ಅರ್ಚನಾ ಭಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. 

ಸಮಾಜದಲ್ಲಿ ಬಾಲಕಾರ್ಮಿಕರು ಅಥವಾ ಕಿಶೋರ ಕಾರ್ಮಿಕರು ಕಂಡು ಬಂದಲ್ಲಿ ಅವರ ರಕ್ಷಣೆಗೆ ಮುಂದಾಗಬೇಕು. ಮಕ್ಕಳನ್ನು ದುಡಿಮೆಯಲ್ಲಿ ತೊಡಗಿಸಿಕೊಂಡವರು ಮತ್ತು ಮಕ್ಕಳ ಪೆÇೀಷಕರಿಗೆ ಅಗತ್ಯ ತಿಳುವಳಿಕೆ ನೀಡಿ ಮಕ್ಕಳನ್ನು ರಕ್ಷಿಸಬೇಕು ಎಂದು ತಿಳಿವಳಿಕೆ ನೀಡಿದರಲ್ಲದೆ ಮಕ್ಕಳ ರಕ್ಷಣೆ ಕುರಿತಾಗಿ ಎಲ್ಲರೂ ಜಾಗೃತರಾಗಿರಬೇಕೆಂದು ಕರೆ ನೀಡಿದರು. 

ಈ ಸಂದರ್ಭ ಉಪತಹಶೀಲ್ದಾರರಾದ  ದಿವಾಕರ್, ನರೇಂದ್ರನಾಥ ಮಿತ್ತೂರು, ಕಂದಾಯ ನಿರೀಕ್ಷಕರಾದ ಜನಾರ್ಧನ್, ವಿಜಯ್, ಗ್ರಾಮ ಆಡಳಿತಾಧಿಕಾರಿಗಳು, ಗ್ರಾಮ ಸಹಾಯಕರು, ತಾಲೂಕು ಕಛೇರಿ ಸಿಬ್ಬಂದಿಗಳು ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ : ವಿಶ್ವ ಬಾಲಕಾರ್ಮಿಕ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾ ವಿಧಿ ಬೋಧನೆ Rating: 5 Reviewed By: karavali Times
Scroll to Top