ಮುಂದುವರಿದ ಭಾರೀ ಮಳೆ ಅಬ್ಬರ : ದ.ಕ. ಜಿಲ್ಲೆಯಲ್ಲಿ ಜೂನ್ 27 ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಡಶಾಲೆಗಳಿಗೆ ರಜೆ ಘೋಷಿಸಿ ಡೀಸಿ ಆದೇಶ - Karavali Times ಮುಂದುವರಿದ ಭಾರೀ ಮಳೆ ಅಬ್ಬರ : ದ.ಕ. ಜಿಲ್ಲೆಯಲ್ಲಿ ಜೂನ್ 27 ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಡಶಾಲೆಗಳಿಗೆ ರಜೆ ಘೋಷಿಸಿ ಡೀಸಿ ಆದೇಶ - Karavali Times

728x90

26 June 2024

ಮುಂದುವರಿದ ಭಾರೀ ಮಳೆ ಅಬ್ಬರ : ದ.ಕ. ಜಿಲ್ಲೆಯಲ್ಲಿ ಜೂನ್ 27 ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಡಶಾಲೆಗಳಿಗೆ ರಜೆ ಘೋಷಿಸಿ ಡೀಸಿ ಆದೇಶ

ಮಂಗಳೂರು, ಜೂನ್ 26, 2024 (ಕರಾವಳಿ ಟೈಮ್ಸ್) : ಜಿಲ್ಲೆಯಾದ್ಯಂತ ಮಂಗಳವಾರ ಸಂಜೆಯಿಂದ ಧಾರಾಕಾರ ಹಾಗೂ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಡಶಾಲೆಗಳಿಗೆ ಝುರ್ಣ 27 ರಂದು ಗುರುವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶಿಸಿದ್ದಾರೆ. 

ಬುಧವಾರ ಬೆಳಗ್ಗಿನಿಂದಲೇ ಜಿಲ್ಲೆಯಲ್ಲಿ ಇನ್ನಷ್ಟು ಮಳೆಯಾಗುತ್ತಿದ್ದು, ಗುರುವಾರ ಕೂಡಾ ಮಳೆ ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದು, ಇನ್ನೂ ಹಲವು ಮುಂಜಾಗ್ರತಾ ಕ್ರಮ ಘೋಷಿಸಿದ್ದಾರೆ. ನೀರು ಇರುವ ತಗ್ಗು ಪ್ರದೇಶ, ಮುಳುಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಗಳಿಗೆ ಸಾರ್ವಜಕನಿಕರು, ಪ್ರವಾಸಿಗರು ತೆರಳದಂತೆ ಮುಂಜಾಗ್ರತೆ ವಹಿಸುವುದು, ಮೀನುಗಾರರು ಮೀನುಗಾರಿಕೆ ಸಮುದ್ರಕ್ಕೆ ತೆರಳದೆ ಇರುವುದು, ಪ್ರಾಕೃತಿಕ ವಿಕೋಪದ ಅಪಾಯಗಳು ಸಂಭವಿಸುವ ಬಗ್ಗೆ ಮುನ್ಸೂಚನೆ ಇದ್ದರೆ ಸಾರ್ವಜನಿಕರು ತಕ್ಷಣ ಸ್ಥಳೀಯಾಡಳಿತವನ್ನು ಸಂಪರ್ಕಿಸುವುದು, ಸಾರ್ವಜನಿಕರು ಜಿಲ್ಲಾಡಳಿತದ ಆದೇಶವನ್ನು ಪಾಲಿಸುವ ಮೂಲಕ ಸಂಭಾವ್ಯ ಮಳೆ ಹಾನಿ, ಪ್ರಾಕೃತಿಕ ವಿಕೋಪ ತಡೆಗಟ್ಟಲು ನೆರವಾಗುವಂತೆ ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ಸೂಚಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಮುಂದುವರಿದ ಭಾರೀ ಮಳೆ ಅಬ್ಬರ : ದ.ಕ. ಜಿಲ್ಲೆಯಲ್ಲಿ ಜೂನ್ 27 ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಡಶಾಲೆಗಳಿಗೆ ರಜೆ ಘೋಷಿಸಿ ಡೀಸಿ ಆದೇಶ Rating: 5 Reviewed By: karavali Times
Scroll to Top