ಕಲ್ಲಡ್ಕ : ಸ್ಕೂಟರ್ ಡಿಕ್ಕಿ ಹೊಡೆದು ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಗಾಯ - Karavali Times ಕಲ್ಲಡ್ಕ : ಸ್ಕೂಟರ್ ಡಿಕ್ಕಿ ಹೊಡೆದು ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಗಾಯ - Karavali Times

728x90

14 June 2024

ಕಲ್ಲಡ್ಕ : ಸ್ಕೂಟರ್ ಡಿಕ್ಕಿ ಹೊಡೆದು ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಗಾಯ

ಬಂಟ್ವಾಳ, ಜೂನ್ 14, 2024 (ಕರಾವಳಿ ಟೈಮ್ಸ್) : ಕಲ್ಲಡ್ಕ ಸರಕಾರಿ ಶಾಲಾ ಬಳಿ ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಸ್ಕೂಟರ್ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಗಾಯಾಳು ಪಾದಚಾರಿಯನ್ನು ಗೋಳ್ತಮಜಲು ನಿವಾಸಿ ಉಪೇಂದ್ರ (60) ಎಂದು ಹೆಸರಿಸಲಾಗಿದೆ. ಇವರು ಗುರುವಾರ ಬೆಳಿಗ್ಗೆ ಗೋಳ್ತಮಜಲು ಗ್ರಾಮದ ಕಲ್ಲಡ್ಕ ಸರಕಾರಿ ಶಾಲೆ ಬಳಿ ರಸ್ತೆಯನ್ನು ದಾಟಲು ನಿಂತಿದ್ದ ವೇಳೆ ಕಲ್ಲಡ್ಕ ಜಂಕ್ಷನ್ ಕಡೆಯಿಂದ ಬಂದ ಅಸ್ಪಕ್ ಅವರು ಚಲಾಯಿಸಿಕೊಂಡು ಬಂದ ಸ್ಕೂಟರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಿಂದ ರಸ್ತೆಗೆ ಬಿದ್ದು ಗಾಯಗೊಂಡ ಉಪೇಂದ್ರ ಅವರನ್ನು ಕಲ್ಲಡ್ಕದ ಪುಷ್ಪರಾಜ್  ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಕಲ್ಲಡ್ಕ : ಸ್ಕೂಟರ್ ಡಿಕ್ಕಿ ಹೊಡೆದು ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಗಾಯ Rating: 5 Reviewed By: karavali Times
Scroll to Top