ಕುಕ್ಕರಬೆಟ್ಟು : ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಆಸ್ಪತ್ರೆಗೆ - Karavali Times ಕುಕ್ಕರಬೆಟ್ಟು : ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಆಸ್ಪತ್ರೆಗೆ - Karavali Times

728x90

16 June 2024

ಕುಕ್ಕರಬೆಟ್ಟು : ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಆಸ್ಪತ್ರೆಗೆ

ಬಂಟ್ವಾಳ, ಜೂನ್ 17, 2024 (ಕರಾವಳಿ ಟೈಮ್ಸ್) : ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನೆಟ್ಲಮುಡ್ನೂರು ಗ್ರಾಮದ ಕುಕ್ಕರಬೆಟ್ಟು ಎಂಬಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. 

ಗಾಯಗೊಂಡ ಸ್ಕೂಟರ್ ಸವಾರನನ್ನು ನೇರಳಕಟ್ಟೆ ನಿವಾಸಿ ತಿಮ್ಮಯ ಗೌಡ ಅವರ ಪುತ್ರ ಶಾನ್ ಎನ್ ಟಿ ಎಂದು ಹೆಸರಿಸಲಾಗಿದೆ. ಇವರು ತಮ್ಮ ಇಲೆಕ್ಟ್ರಿಕ್ ಸ್ಕೂಟರಿನಲ್ಲಿ ನೇರಳಕಟ್ಟೆಯಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ವೇಳೆ ಕುಕ್ಕರಬೆಟ್ಟು ಎಂಬಲ್ಲಿ ಮನೀಶ್ ಅವರು ಚಲಾಯಿಸಿಕೊಂಡು ಬಂದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಗಾಯಗೊಂಡ ಶಾನ್ ಅವರನ್ನು ಮಂಗಳೂರಿನ ಕೆ ಎಂ ಸಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ಕುಕ್ಕರಬೆಟ್ಟು : ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಆಸ್ಪತ್ರೆಗೆ Rating: 5 Reviewed By: karavali Times
Scroll to Top