ಬೆಳ್ತಂಗಡಿ : ಖಾಸಗಿ ಬಸ್ಸು ಡಿಕ್ಕಿ ಹೊಡೆದು ಬೈಕ್ ಸವಾರ ದಾರುಣ ಮೃತ್ಯು - Karavali Times ಬೆಳ್ತಂಗಡಿ : ಖಾಸಗಿ ಬಸ್ಸು ಡಿಕ್ಕಿ ಹೊಡೆದು ಬೈಕ್ ಸವಾರ ದಾರುಣ ಮೃತ್ಯು - Karavali Times

728x90

28 June 2024

ಬೆಳ್ತಂಗಡಿ : ಖಾಸಗಿ ಬಸ್ಸು ಡಿಕ್ಕಿ ಹೊಡೆದು ಬೈಕ್ ಸವಾರ ದಾರುಣ ಮೃತ್ಯು

 ಬೆಳ್ತಂಗಡಿ, ಜೂನ್ 28, 2024 (ಕರಾವಳಿ ಟೈಮ್ಸ್) : ಖಾಸಗಿ ಬಸ್ಸು ಡಿಕ್ಕಿ ಹೊಡೆದು ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಲಾಯಿಲ ಗ್ರಾಮದ ಪುತ್ರಬೈಲು ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. 

ಮೃತ ಬೈಕ್ ಸವಾರನನ್ನು ಜಯರಾಮ ಹೆಗ್ಡೆ ಎಂದು ಹೆಸರಿಸಲಾಗಿದೆ. ಇವರು ತನ್ನ ಬೈಕಿನಲ್ಲಿ ಲಾಯಿಲ ಕಡೆಯಿಂದ ಮಂಜೊಟ್ಟಿ ಕಡೆಗೆ ತೆರಳುತ್ತಿದ್ದ ವೇಳೆ ಪುತ್ರಬೈಲು ಎಂಬಲ್ಲಿ ವಿರುದ್ದ ದಿಕ್ಕಿನಿಂದ ಸುದರ್ಶನ್ ಎಂಬವರು ಚಲಾಯಿಸಿಕೊಂಡು ಬಂದ ಖಾಸಗಿ ಬಸ್ಸು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಜಯರಾಮ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಲಾಯಿತಾದರೂ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಕನ್ಯಾಡಿ ನಿವಾಸಿ ಮನೋಹರ್ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಬೆಳ್ತಂಗಡಿ : ಖಾಸಗಿ ಬಸ್ಸು ಡಿಕ್ಕಿ ಹೊಡೆದು ಬೈಕ್ ಸವಾರ ದಾರುಣ ಮೃತ್ಯು Rating: 5 Reviewed By: karavali Times
Scroll to Top