ಕೈ ಮುಖಂಡ ರಾಜಣ್ಣ ನಿಧನಕ್ಕೆ ಸಜಿಪಮುನ್ನೂರು ವಲಯ ಕಾಂಗ್ರೆಸ್ ಸಂತಾಪ - Karavali Times ಕೈ ಮುಖಂಡ ರಾಜಣ್ಣ ನಿಧನಕ್ಕೆ ಸಜಿಪಮುನ್ನೂರು ವಲಯ ಕಾಂಗ್ರೆಸ್ ಸಂತಾಪ - Karavali Times

728x90

12 June 2024

ಕೈ ಮುಖಂಡ ರಾಜಣ್ಣ ನಿಧನಕ್ಕೆ ಸಜಿಪಮುನ್ನೂರು ವಲಯ ಕಾಂಗ್ರೆಸ್ ಸಂತಾಪ

ಬಂಟ್ವಾಳ, ಜೂನ್ 13, 2024 (ಕರಾವಳಿ ಟೈಮ್ಸ್) : ಹಿರಿಯ ಕಾಂಗ್ರೆಸ್ ಮುಖಂಡ ರಾಜಶೇಖರ ನಾಯಕ್ ಖಂಡಿಗ ಅವರ ನಿಧನಕ್ಕೆ ಸಜಿಪಮುನ್ನೂರು ವಲಯ ಕಾಂಗ್ರೆಸ್ ತೀವ್ರ ಸಂತಾಪ ಸೂಚಿಸಿದೆ.


ಸ್ಥಳೀಯವಾಗಿ ಹಾಗೂ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಸಮಾಜದ ಎಲ್ಲ ವರ್ಗದ ಜನರೊಂದಿಗೆ ಆತ್ಮೀಯ ಒಡನಾಟ ಇಟ್ಟುಕೊಂಡು, ಜಾತ್ಯಾತೀತ ಸಿದ್ದಾಂತವನ್ನು ಜೀವನದುದ್ದಕ್ಕೂ ಮೈಗೂಡಿಸಿಕೊಂಡು ಬಂದಿದ್ದ ರಾಜಣ್ಣ ಅವರ ಅಗಲಿಕೆ ಗ್ರಾಮಕ್ಕೆ ಹಾಗೂ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಜಿಪಮುನ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಯೂಸುಫ್ ಕರಂದಾಡಿ ಸಂತಾಪ ಸೂಚಕ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮೃತರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡುವುದರ ಜೊತೆಗೆ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಗ್ರಾಮಸ್ಥರಿಗೆ, ಅಭಿಮಾನಿಗಳಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ದಯಪಾಲಿಸಲಿ ಎಂದವರು ಪ್ರಾರ್ಥಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಕೈ ಮುಖಂಡ ರಾಜಣ್ಣ ನಿಧನಕ್ಕೆ ಸಜಿಪಮುನ್ನೂರು ವಲಯ ಕಾಂಗ್ರೆಸ್ ಸಂತಾಪ Rating: 5 Reviewed By: lk
Scroll to Top