ಸುಳ್ಯ : ಸರಕಾರಿ ಶಾಲಾ ಜಗಲಿಯ ಮೇಲೆ ಅಪರಿಚಿತ ವ್ಯಕ್ತಿ ಗಾಯಗೊಂಡು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ - Karavali Times ಸುಳ್ಯ : ಸರಕಾರಿ ಶಾಲಾ ಜಗಲಿಯ ಮೇಲೆ ಅಪರಿಚಿತ ವ್ಯಕ್ತಿ ಗಾಯಗೊಂಡು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ - Karavali Times

728x90

18 June 2024

ಸುಳ್ಯ : ಸರಕಾರಿ ಶಾಲಾ ಜಗಲಿಯ ಮೇಲೆ ಅಪರಿಚಿತ ವ್ಯಕ್ತಿ ಗಾಯಗೊಂಡು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಸುಳ್ಯ, ಜೂನ್ 18, 2024 (ಕರಾವಳಿ ಟೈಮ್ಸ್) : ಶಾಲಾ ಜಗಲಿಯಲ್ಲಿ ಅಪರಿಚಿತ ವ್ಯಕ್ತಿ ಗಾಯಗೊಂಡು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅಜ್ಜಾವರ ಗ್ರಾಮದ ಕಾಂತಮಂಗಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. 

ಈ ಬಗ್ಗೆ ಶಾಲಾ ಮುಖ್ಯ ಶಿಕ್ಷಕಿ ಸ್ವರ್ಣಲತಾ ಎಂ ಅವರು ಸುಳ್ಯ ಪೊಲೀಸರಿಗೆ ದೂರು ನೀಡಿದ್ದು,  ತಾನು ಮುಖ್ಯ ಶಿಕ್ಷಕಿಯಾಗಿರುವ ಅಜ್ಜಾವರ ಗ್ರಾಮದ ಕಾಂತಮಂಗಲ ಎಂಬಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಬೆಳಿಗ್ಗೆ ಅಪರಿಚಿತ ವ್ಯಕ್ತಿಯೊಬ್ಬರು ಶಾಲೆಯ ಜಗಲಿ ಮೇಲೆ ಗಾಯಗೊಂಡು ಮೃತಪಟ್ಟ ಸ್ಥಿತಿಯಲ್ಲಿರುವುದು ಕಂಡು ಬಂದಿರುವುದಾಗಿ ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ ಹೋಗಿ ನೋಡಿದ್ದು, ಸುಮಾರು 40 ರಿಂದ 45 ವರ್ಷದ ಅಪರಿಚಿತ ವ್ಯಕ್ತಿ ತಲೆಗೆ ಗಾಯವಾಗಿ ಮೃತಪಟ್ಟಿರುವುದು ಕಂಡು ಬಂದಿದೆ. ಮೃತಪಟ್ಟ ಸ್ಥಳದಲ್ಲಿ ತೀವ್ರ ಸ್ವರೂಪದ ರಕ್ತ ಸ್ರಾವವಾಗಿರುತ್ತದೆ. ಮೃತ ವ್ಯಕ್ತಿಯ ಬಗ್ಗೆ ಸ್ಥಳಿಯರಲ್ಲಿ ಯಾವುದೇ ಮಾಹಿತಿ ಇರುವುದಿಲ್ಲ. 

ಭಾನುವಾರ ಮಧ್ಯಾಹ್ನದಿಂದ ಸೋಮವಾರ ಬೆಳಿಗ್ಗಿನ ಅವಧಿಯಲ್ಲಿ ಅಪರಿಚಿತ ವ್ಯಕ್ತಿಯನ್ನು ಯಾರೋ ಕಲ್ಲಿನಿಂದ ತಲೆಗೆ ಹೊಡೆದು ಕೊಲೆ ಮಾಡಿರುವ ಸಾಧ್ಯತೆ ಕಂಡು ಬರುತ್ತಿದೆ ಎಂಬುದಾಗಿ ನೀಡಿದ ದೂರಿನಂತೆ ಸುಳ್ಯ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 


  • Blogger Comments
  • Facebook Comments

0 comments:

Post a Comment

Item Reviewed: ಸುಳ್ಯ : ಸರಕಾರಿ ಶಾಲಾ ಜಗಲಿಯ ಮೇಲೆ ಅಪರಿಚಿತ ವ್ಯಕ್ತಿ ಗಾಯಗೊಂಡು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ Rating: 5 Reviewed By: karavali Times
Scroll to Top