ಸುಳ್ಯ : ವಿದ್ಯುತ್ ಕಂಬದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಗುತ್ತಿಗೆ ಕಾರ್ಮಿಕ ದಾರುಣ ಮೃತ್ಯು - Karavali Times ಸುಳ್ಯ : ವಿದ್ಯುತ್ ಕಂಬದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಗುತ್ತಿಗೆ ಕಾರ್ಮಿಕ ದಾರುಣ ಮೃತ್ಯು - Karavali Times

728x90

17 June 2024

ಸುಳ್ಯ : ವಿದ್ಯುತ್ ಕಂಬದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಗುತ್ತಿಗೆ ಕಾರ್ಮಿಕ ದಾರುಣ ಮೃತ್ಯು

ಸುಳ್ಯ, ಜೂನ್ 18, 2024 (ಕರಾವಳಿ ಟೈಮ್ಸ್) : ವಿದ್ಯುತ್ ಕಂಬದಲ್ಲಿ ವಾಹನ ಬದಲಾವಣೆ ಕೆಲಸ ಮಾಡಿಕೊಂಡಿದ್ದ ವೇಳೆ ವಿದ್ಯುತ್ ಪ್ರವಹಿಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮುರುಳ್ಯ ಗ್ರಾಮದ ಅಲೆಕ್ಕಾಡಿ ಪಾರ್ಲ ಎಂಬಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. 

ಮೃತ ಮೆಸ್ಕಾಂ ಗುತ್ತಿಗೆ ಉದ್ಯೋಗಿಯನ್ನು ಬೆಳ್ತಂಗಡಿ ತಾಲೂಕು, ಮೊಗ್ರು ಗ್ರಾಮದ ನಿವಾಸಿ ಪ್ರಕಾಶ್ ಎಂದು ಹೆಸರಿಸಲಾಗಿದೆ. ಇವರು ತಮ್ಮ ಸಹೋದರರಾದ ಸೀತಾರಾಮ, ಪುರಂದರ ಅವರ ಜೊತೆ ಕಳೆದ 3 ವರ್ಷಗಳಿಂದ ಮೆಸ್ಕಾಂ ಗುತ್ತಿಗೆದಾರ ಅಭಿಲಾಶ್ ಎಂಬವರ ಜೊತೆ ವಾಹಕ ಬದಲಾವಣೆ ಕೆಲಸ ಮಾಡಿಕೊಂಡಿದ್ದು, ಸೋಮವಾರ ಬೆಳಿಗ್ಗೆ ಪಂಜ ಮೆಸ್ಕಾಂ ವಲಯಕ್ಕೆ ಸೇರಿದ ಸುಳ್ಯ ತಾಲೂಕು ಮುರುಳ್ಯ ಗ್ರಾಮದ ಅಲೆಕ್ಕಾಡಿ ಪಾರ್ಲ ಎಂಬಲ್ಲಿ ವಿದ್ಯುತ್ ಕಂಬಗಳಲ್ಲಿ ಕೆಲಸ ಮಾಡಿಕೊಂಡಿದ್ದ ವೇಳೆ ವಿದ್ಯುತ್ ಪ್ರವಹಿಸಿದ ಪರಿಣಾಮ ಪ್ರಜ್ಞಾಹೀನರಾಗಿದ್ದಾರೆ. ತಕ್ಷಣ ಅವರನ್ನು ಕಂಬದಿಂದ ಕೆಳಕ್ಕಿಳಿಸಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮೃತರ ಅಣ್ಣ ಸೀತಾರಾಮ ಅವರು ನೀಡಿದ ದೂರಿನಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಸುಳ್ಯ : ವಿದ್ಯುತ್ ಕಂಬದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಗುತ್ತಿಗೆ ಕಾರ್ಮಿಕ ದಾರುಣ ಮೃತ್ಯು Rating: 5 Reviewed By: karavali Times
Scroll to Top