ಯುಜಿಸಿ-ಎನ್.ಇ.ಟಿ. ಪರೀಕ್ಷೆ ರದ್ದು : ರಾಜ್ಯಗಳಿಗೆ ಸ್ವಾಯತ್ತತೆ ನೀಡುವಂತೆ ಎನ್.ಎಸ್.ಯು.ಐ. ಆಗ್ರಹ - Karavali Times ಯುಜಿಸಿ-ಎನ್.ಇ.ಟಿ. ಪರೀಕ್ಷೆ ರದ್ದು : ರಾಜ್ಯಗಳಿಗೆ ಸ್ವಾಯತ್ತತೆ ನೀಡುವಂತೆ ಎನ್.ಎಸ್.ಯು.ಐ. ಆಗ್ರಹ - Karavali Times

728x90

21 June 2024

ಯುಜಿಸಿ-ಎನ್.ಇ.ಟಿ. ಪರೀಕ್ಷೆ ರದ್ದು : ರಾಜ್ಯಗಳಿಗೆ ಸ್ವಾಯತ್ತತೆ ನೀಡುವಂತೆ ಎನ್.ಎಸ್.ಯು.ಐ. ಆಗ್ರಹ

ಮಂಗಳೂರು, ಜೂನ್ 21, 2024 (ಕರಾವಳಿ ಟೈಮ್ಸ್) : ಕೇಂದ್ರ ಬಿಜೆಪಿ ಸರಕಾರದ ಅವ್ಯವಸ್ಥೆಯಿಂದಾಗಿ ಯುಜಿಸಿ-ಎನ್ ಇ ಟಿ ಪರೀಕ್ಷೆ ರದ್ದಾಗಿದ್ದು, ಇದರಿಂದಾಗಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಡಕಾಗಿದೆ. ಇದನ್ನು ಖಂಡಿಸಿ ಎನ್ ಎಸ್ ಯು ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರು ಜ್ಯೋತಿ ಅಂಬೇಡ್ಕರ್ ವೃತ್ತದ ಬಳಿ ಶುಕ್ರವಾರ ಸಂಜೆ ಪ್ರತಿಭಟನೆ ನಡೆಸಲಾಯಿತು.

ಎನ್ ಟಿ ಎ ನಡೆಸುವ ಕೇಂದ್ರಿಕೃತ ಎನ್ ಇ ಇ ಟಿ ಪರೀಕ್ಷೆಯನ್ನು ರದ್ದುಪಡಿಸಿ, ಎನ್ ಇ ಇ ಟಿ ಪರೀಕ್ಷೆ ನಡೆಸಲು ಆಯಾ ರಾಜ್ಯಗಳಿಗೆ ಸ್ವಾಯತ್ತತೆ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. 

ಎನ್ ಎಸ್ ಯು ಐ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷರಾದ ಸುಖ್ವಿಂದರ್ ಸಿಂಗ್, ನಜೀಬ್ ಮಂಚಿ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಕ್ರಿಸ್ಟನ್ ಮಿನೇಜಸ್, ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಸಫ್ವಾನ್ ಸರವು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ರೋನ್ಸ್ಟನ್ ಸಿಕ್ವೇರಾ, ವಿಶಾಲ್, ಸೋಹಾನ್, ಸೃಜನ್, ಫಾರೂಕ್ ಮೊದಲಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಯುಜಿಸಿ-ಎನ್.ಇ.ಟಿ. ಪರೀಕ್ಷೆ ರದ್ದು : ರಾಜ್ಯಗಳಿಗೆ ಸ್ವಾಯತ್ತತೆ ನೀಡುವಂತೆ ಎನ್.ಎಸ್.ಯು.ಐ. ಆಗ್ರಹ Rating: 5 Reviewed By: karavali Times
Scroll to Top