ಮಣಿನಾಲ್ಕೂರು : ರಸ್ತೆ ಬದಿಯ ಗದ್ದೆಗೆ ಉರುಳಿ ಬಿದ್ದ ಖಾಸಗಿ ಬಸ್ಸು, ಅಪಾಯದಿಂದ ಪಾರಾದ ಪ್ರಯಾಣಿಕರು - Karavali Times ಮಣಿನಾಲ್ಕೂರು : ರಸ್ತೆ ಬದಿಯ ಗದ್ದೆಗೆ ಉರುಳಿ ಬಿದ್ದ ಖಾಸಗಿ ಬಸ್ಸು, ಅಪಾಯದಿಂದ ಪಾರಾದ ಪ್ರಯಾಣಿಕರು - Karavali Times

728x90

15 July 2024

ಮಣಿನಾಲ್ಕೂರು : ರಸ್ತೆ ಬದಿಯ ಗದ್ದೆಗೆ ಉರುಳಿ ಬಿದ್ದ ಖಾಸಗಿ ಬಸ್ಸು, ಅಪಾಯದಿಂದ ಪಾರಾದ ಪ್ರಯಾಣಿಕರು

ಬಂಟ್ವಾಳ, ಜುಲೈ 15, 2024 (ಕರಾವಳಿ ಟೈಮ್ಸ್) : ಮಣಿನಾಲ್ಕೂರು ಗ್ರಾಮದ ಕೊಟ್ಟುಂಜ ಎಂಬಲ್ಲಿ ಖಾಸಗಿ ಬಸ್ಸು ರಸ್ತೆ ಸಮೀಪದ ಗದ್ದೆಗೆ ಉರುಳಿ ಬಿದ್ದ ಘಟನೆ ಸೋಮವಾರ ಸಂಭವಿಸಿದೆ. 

ಅಜಿಲಮೊಗರು-ಸರಪಾಡಿ ರಸ್ತೆಯಲ್ಲಿ ಸಂಚರಿಸುವ ಜೀವನ್ ಜ್ಯೋತಿ ಖಾಸಗಿ ಬಸ್ಸು ಇದಾಗಿದ್ದು, ಚಾಲಕನ ನಿಯಂತ್ರಣ ಮೀರಿ ರಸ್ತೆಯಿಂದ ನೇರವಾಗಿ ಚರಂಡಿಗೆ ಉರುಳಿ ಬಿದ್ದಿದೆ. ಅಪಘಾತದಿಂದ ಬಸ್ಸಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಗದ್ದೆಯಲ್ಲಿ ನೀರು ತುಂಬಿದ್ದು, ಉರುಳಿ ಬಿದ್ದ ಬಸ್ ಪ್ರಯಾಣಿಕರು ಕೆಸರ ನೀರಲ್ಲಿ ತೋಯ್ದು ಹೋಗಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಮಣಿನಾಲ್ಕೂರು : ರಸ್ತೆ ಬದಿಯ ಗದ್ದೆಗೆ ಉರುಳಿ ಬಿದ್ದ ಖಾಸಗಿ ಬಸ್ಸು, ಅಪಾಯದಿಂದ ಪಾರಾದ ಪ್ರಯಾಣಿಕರು Rating: 5 Reviewed By: karavali Times
Scroll to Top