ಕಡೆಗೋಳಿ : ಗೂಡ್ಸ್ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದು ಕಾರು ಜಖಂ, ಚಾಲಕ ಪಾರು - Karavali Times ಕಡೆಗೋಳಿ : ಗೂಡ್ಸ್ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದು ಕಾರು ಜಖಂ, ಚಾಲಕ ಪಾರು - Karavali Times

728x90

5 July 2024

ಕಡೆಗೋಳಿ : ಗೂಡ್ಸ್ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದು ಕಾರು ಜಖಂ, ಚಾಲಕ ಪಾರು

ಬಂಟ್ವಾಳ, ಜುಲೈ 05, 2024 (ಕರಾವಳಿ ಟೈಮ್ಸ್) : ಕಾರಿಗೆ ಹಿಂದಿನಿಂದ ಗೂಡ್ಸ್ ಲಾರಿ ಡಿಕ್ಕಿ ಹೊಡೆದು ಕಾರು ಜಖಂಗೊಂಡು ಚಾಲಕ ಅಪಾಯದಿಂದ ಪಾರಾದ ಘಟನೆ ಪುದು ಗ್ರಾಮದ ಕಡೆಗೋಳಿ ಎಂಬಲ್ಲಿ ಸಂಭವಿಸಿದೆ. 

ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣ ನಿವಾಸಿ ಜೇಮಿ ಸೈಮನ್ ಜೆರ್ಪಸ್ (64) ಅವರು ಶುಕ್ರವಾರ ಮದ್ಯಾಹ್ನ ತನ್ನ ಕೆಎ04 ಎಂಸ್ 2650 ನೋಂದಣಿ ಸಂಖ್ಯೆಯ ಕಾರಿನಲ್ಲಿ ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವೇಳೆ ಪುದು ಗ್ರಾಮದ ಕಡೆಗೋಳಿ ಎಂಬಲ್ಲಿಗೆ ತಲುಪಿದಾಗ ಹಿಂದಿನಿಂದ ಬಂದ ಬನ್ವರ್ ಲಾಲ್ ಎಂಬವರು ಚಲಾಯಿಸುತ್ತಿದ್ದ ಕೆ ಎಲ್ 13 ಎಟಿ 240 ನೋಂದಣಿ ಸಂಖ್ಯೆಯ ಗೂಡ್ಸ್ ಲಾರಿ ಕಾರಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಕಾರು ಜಖಂಗೊಂಡಿದ್ದು, ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಕಡೆಗೋಳಿ : ಗೂಡ್ಸ್ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದು ಕಾರು ಜಖಂ, ಚಾಲಕ ಪಾರು Rating: 5 Reviewed By: karavali Times
Scroll to Top