ಅಕ್ರಮ ಜುಗಾರಿ ಅಡ್ಡೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸರ ದಾಳಿ : ಆರು ಮಂದಿ ಸೆರೆ, ಓರ್ವ ಪರಾರಿ - Karavali Times ಅಕ್ರಮ ಜುಗಾರಿ ಅಡ್ಡೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸರ ದಾಳಿ : ಆರು ಮಂದಿ ಸೆರೆ, ಓರ್ವ ಪರಾರಿ - Karavali Times

728x90

25 July 2024

ಅಕ್ರಮ ಜುಗಾರಿ ಅಡ್ಡೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸರ ದಾಳಿ : ಆರು ಮಂದಿ ಸೆರೆ, ಓರ್ವ ಪರಾರಿ

 ಬಂಟ್ವಾಳ, ಜುಲೈ 26, 2024 (ಕರಾವಳಿ ಟೈಮ್ಸ್) : ತಾಲೂಕಿನ ಪಿಲಿಮೊಗ್ರು ಗ್ರಾಮದ ನಡಾಯಿ ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಜುಗಾರಿ ಅಡ್ಡೆಗೆ ಬುಧವಾರ ರಾತ್ರಿ ಬಂಟ್ವಾಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದು, ಆರು ಮಂದಿ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ. ಓರ್ವ ಪರಾರಿಯಾಗಿದ್ದಾನೆ. 

ಬಂಧಿತ ಆರೋಪಿಗಳನ್ನು ಶಿವರಾಮ ನಾಯಕ್‌ (56), ಸತೀಶ (43), ಅಶ್ರಫ್‌  (47), ಸುರೇಶ (35), ಗೋಪಾಲ (41), ಯೋಗೀಶ ಪ್ರಭು, (46) ಎಂದು ಹೆಸರಿಸಲಾಗಿದ್ದು, ಜಯಣ್ಣ ಅಲಿಯಾಸ್ ಜಯಚಂದ್ರ ಬೊಳ್ಮಾರ್‌ ಎಂಬಾತ ಪೊಲೀಸರ ಕೈಗೆ ಸಿಗದೆ ಪರಾರಿಯಾಗಿದ್ದಾನೆ.

 ಆರೋಪಿ ಜಯಚಂದ್ರ ಬೊಳ್ಮಾರ್‌ ಎಂಬಾತನ ಒಡೆತನದ ಪಿಲಿಮೊಗರು ಗ್ರಾಮದ ನಡಾಯಿ ಎಂಬಲ್ಲಿರುವ  ಮನೆಯೊಳಗೆ  ಇಸ್ಪೀಟ್‌ ಎಲೆಗಳನ್ನು ಬಳಸಿ ಅಕ್ರಮವಾಗಿ ಈ ಜುಗಾರಿ ಅಡ್ಡೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾ ಪೊಲೀಸ್‌ ಇನ್ಸ್ ಪೆಕ್ಟರ್ ಶಿವಕುಮಾರ್ ನೇತೃತ್ವದ ಪೊಲೀಸರು ದಾಳಿ ನಡೆಸಿ ಕಾರ್ಯಾಚರಣೆ ನಡೆಸಿದ್ದಾರೆ.   

 ದಾಳಿ ವೇಳೆ ಸ್ಥಳದಲ್ಲಿ ದೊರೆತ 28,120/- ರೂಪಾಯಿ ನಗದು ಸಹಿತ  ಇತರೆ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ಅಕ್ರಮ ಜುಗಾರಿ ಅಡ್ಡೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸರ ದಾಳಿ : ಆರು ಮಂದಿ ಸೆರೆ, ಓರ್ವ ಪರಾರಿ Rating: 5 Reviewed By: lk
Scroll to Top