ಮಳೆ ಬಿರುಸು ಹಾಗೂ ಪ್ರವಾಹ ಭೀತಿ : ಜುಲೈ 20 ರ ಶನಿವಾರ ದ.ಕ. ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ತರಗತಿಗಳಿಗೆ ರಜೆ ಘೋಷಿಸಿದ ಡೀಸಿ - Karavali Times ಮಳೆ ಬಿರುಸು ಹಾಗೂ ಪ್ರವಾಹ ಭೀತಿ : ಜುಲೈ 20 ರ ಶನಿವಾರ ದ.ಕ. ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ತರಗತಿಗಳಿಗೆ ರಜೆ ಘೋಷಿಸಿದ ಡೀಸಿ - Karavali Times

728x90

19 July 2024

ಮಳೆ ಬಿರುಸು ಹಾಗೂ ಪ್ರವಾಹ ಭೀತಿ : ಜುಲೈ 20 ರ ಶನಿವಾರ ದ.ಕ. ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ತರಗತಿಗಳಿಗೆ ರಜೆ ಘೋಷಿಸಿದ ಡೀಸಿ

 ಮಂಗಳೂರು, ಜುಲೈ 19, 2024 (ಕರಾವಳಿ ಟೈಮ್ಸ್) : ಜಿಲ್ಲೆಯಲ್ಲಿ ಮಳೆ ಮುಂದುವರಿದಿರುವ ಹಾಗೂ ನೆರೆ ಭೀತಿ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ, ಪಿಯು ತರಗತಿಗಳಿಗೆ   ಜುಲೈ 20 ರ ಶನಿವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶಿಸಿದ್ದಾರೆ. 

 ವರುಣಾರ್ಭಟ ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್  ಈ ಆದೇಶ ನೀಡಿದ್ದಾರೆ.

ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯಗೊಳಿಸುವಂತಿಲ್ಲ, ದುರ್ಬಲ ಅಥವಾ ಶಿಥಿಲ ಕಟ್ಟಡಗಳಿದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ-ಪ್ರವಚನಗಳಿಗೆ ಬಳಸುವಂತಿಲ್ಲ, ಈ ನಿಟ್ಟಿನಲ್ಲಿ ಶಾಲಾ-ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನ ಹರಿಸಬೇಕು. ನೀರು ಇರುವ ತಗ್ಗು ಪ್ರದೇಶ, ಮುಳುಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಗಳಿಗೆ ಸಾರ್ವಜಕನಿಕರು, ಪ್ರವಾಸಿಗರು ತೆರಳದಂತೆ ಮುಂಜಾಗ್ರತೆ ವಹಿಸುವುದು, ಮೀನುಗಾರರು ಮೀನುಗಾರಿಕೆ ಸಮುದ್ರಕ್ಕೆ ತೆರಳದೆ ಇರುವುದು, ಪ್ರಾಕೃತಿಕ ವಿಕೋಪದ ಅಪಾಯಗಳು ಸಂಭವಿಸುವ ಬಗ್ಗೆ ಮುನ್ಸೂಚನೆ ಇದ್ದರೆ ಸಾರ್ವಜನಿಕರು ತಕ್ಷಣ ಸ್ಥಳೀಯಾಡಳಿತವನ್ನು ಸಂಪರ್ಕಿಸುವುದು, ಸಾರ್ವಜನಿಕರು ಜಿಲ್ಲಾಡಳಿತದ ಆದೇಶವನ್ನು ಪಾಲಿಸುವ ಮೂಲಕ ಸಂಭಾವ್ಯ ಮಳೆ ಹಾನಿ, ಪ್ರಾಕೃತಿಕ ವಿಕೋಪ ತಡೆಗಟ್ಟಲು ನೆರವಾಗುವಂತೆ ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ಸೂಚಿಸಿದ್ದಾರೆ. ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ತುರ್ತು ಸೇವೆ ಟೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂಂ 1077 ಅಥವಾ ದೂರವಾಣಿ ಸಂಖ್ಯೆ 0824-2442590 ಹಾಗೂ ಆಯಾ ತಾಲೂಕುಗಳ ಕಂಟ್ರೋಲ್ ರೂಂ ಸಂಖ್ಯೆ ಗೆ ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸಾರ್ವಜನಿಕರಿಗೆ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಮಳೆ ಬಿರುಸು ಹಾಗೂ ಪ್ರವಾಹ ಭೀತಿ : ಜುಲೈ 20 ರ ಶನಿವಾರ ದ.ಕ. ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ತರಗತಿಗಳಿಗೆ ರಜೆ ಘೋಷಿಸಿದ ಡೀಸಿ Rating: 5 Reviewed By: lk
Scroll to Top