ಮುಂದುವರಿದ ಮಳೆ : ಜುಲೈ 19 ರ ಶುಕ್ರವಾರ ಕೂಡಾ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಅಂಗನವಾಡಿ, ಶಾಲೆ, ಪಿಯು ತರಗತಿಗಳಿಗೆ ರಜೆ ಘೋಷಿಸಿದ ಡೀಸಿ - Karavali Times ಮುಂದುವರಿದ ಮಳೆ : ಜುಲೈ 19 ರ ಶುಕ್ರವಾರ ಕೂಡಾ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಅಂಗನವಾಡಿ, ಶಾಲೆ, ಪಿಯು ತರಗತಿಗಳಿಗೆ ರಜೆ ಘೋಷಿಸಿದ ಡೀಸಿ - Karavali Times

728x90

18 July 2024

ಮುಂದುವರಿದ ಮಳೆ : ಜುಲೈ 19 ರ ಶುಕ್ರವಾರ ಕೂಡಾ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಅಂಗನವಾಡಿ, ಶಾಲೆ, ಪಿಯು ತರಗತಿಗಳಿಗೆ ರಜೆ ಘೋಷಿಸಿದ ಡೀಸಿ

 

ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ. ತಾಲೂಕುಗಳ ಶಾಲೆಗಳಿಗೆ ರಜೆ ಇಲ್ಲ


ಮಂಗಳೂರು, ಜುಲೈ 18, 2024 (ಕರಾವಳಿ ಟೈಮ್ಸ್) : ಜಿಲ್ಲೆಯಲ್ಲಿ ಮಳೆ ಮುಂದುವರಿದಿರುವ ಹಿನ್ನಲೆಯಲ್ಲಿ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ

ಕಡಬ ತಾಲೂಕುಗಳಿಗೆ ಜುಲೈ 19 ರ ಶುಕ್ರವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶಿಸಿದ್ದಾರೆ. ಡೀಸಿ ಆದೇಶ ಪ್ರಕಾರ ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ. ತಾಲೂಕುಗಳ ಶಾಲೆಗಳಿಗೆ ಶುಕ್ರವಾರವೂ ರಜೆ ಘೋಷಣೆಯಾಗಿಲ್ಲ

 ವರುಣಾರ್ಭಟ ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮೇಲಿನ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಸಹಿತ ಪಿಯುಸಿ ತರಗತಿಗಳಿಗೂ ಜುಲೈ 19 ರಂದು ಶುಕ್ರವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶಿಸಿದ್ದಾರೆ. 

ಸದ್ರಿ ತಾಲೂಕುಗಳಲ್ಲಿ ಅಗತ್ಯ ಬಿದ್ದರೆ ಆನ್ ಲೈನ್ ತರಗತಿ ನಡೆಸಬಹುದು. ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯಗೊಳಿಸುವಂತಿಲ್ಲ, ದುರ್ಬಲ ಅಥವಾ ಶಿಥಿಲ ಕಟ್ಟಡಗಳಿದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ-ಪ್ರವಚನಗಳಿಗೆ ಬಳಸುವಂತಿಲ್ಲ, ಈ ನಿಟ್ಟಿನಲ್ಲಿ ಶಾಲಾ-ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನ ಹರಿಸಬೇಕು. ನೀರು ಇರುವ ತಗ್ಗು ಪ್ರದೇಶ, ಮುಳುಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಗಳಿಗೆ ಸಾರ್ವಜಕನಿಕರು, ಪ್ರವಾಸಿಗರು ತೆರಳದಂತೆ ಮುಂಜಾಗ್ರತೆ ವಹಿಸುವುದು, ಮೀನುಗಾರರು ಮೀನುಗಾರಿಕೆ ಸಮುದ್ರಕ್ಕೆ ತೆರಳದೆ ಇರುವುದು, ಪ್ರಾಕೃತಿಕ ವಿಕೋಪದ ಅಪಾಯಗಳು ಸಂಭವಿಸುವ ಬಗ್ಗೆ ಮುನ್ಸೂಚನೆ ಇದ್ದರೆ ಸಾರ್ವಜನಿಕರು ತಕ್ಷಣ ಸ್ಥಳೀಯಾಡಳಿತವನ್ನು ಸಂಪರ್ಕಿಸುವುದು, ಸಾರ್ವಜನಿಕರು ಜಿಲ್ಲಾಡಳಿತದ ಆದೇಶವನ್ನು ಪಾಲಿಸುವ ಮೂಲಕ ಸಂಭಾವ್ಯ ಮಳೆ ಹಾನಿ, ಪ್ರಾಕೃತಿಕ ವಿಕೋಪ ತಡೆಗಟ್ಟಲು ನೆರವಾಗುವಂತೆ ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ಸೂಚಿಸಿದ್ದಾರೆ. ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ತುರ್ತು ಸೇವೆ ಟೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂಂ 1077 ಅಥವಾ ದೂರವಾಣಿ ಸಂಖ್ಯೆ 0824-2442590 ಹಾಗೂ ಆಯಾ ತಾಲೂಕುಗಳ ಕಂಟ್ರೋಲ್ ರೂಂ ಸಂಖ್ಯೆ ಗೆ ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸಾರ್ವಜನಿಕರಿಗೆ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಮುಂದುವರಿದ ಮಳೆ : ಜುಲೈ 19 ರ ಶುಕ್ರವಾರ ಕೂಡಾ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಅಂಗನವಾಡಿ, ಶಾಲೆ, ಪಿಯು ತರಗತಿಗಳಿಗೆ ರಜೆ ಘೋಷಿಸಿದ ಡೀಸಿ Rating: 5 Reviewed By: lk
Scroll to Top