ಸರ್ವಧರ್ಮಗಳ ಪ್ರತಿಪಾದಕರಾಗಿದ್ದ ತಂಙಳ್ ನಿಧನ ಕರಾವಳಿ ಜನರಿಗೆ ತುಂಬಲಾರದ ನಷ್ಟ : ಸಯ್ಯಿದ್ ಕೂರತ್ ತಂಙಳ್ ನಿಧನಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಂತಾಪ - Karavali Times ಸರ್ವಧರ್ಮಗಳ ಪ್ರತಿಪಾದಕರಾಗಿದ್ದ ತಂಙಳ್ ನಿಧನ ಕರಾವಳಿ ಜನರಿಗೆ ತುಂಬಲಾರದ ನಷ್ಟ : ಸಯ್ಯಿದ್ ಕೂರತ್ ತಂಙಳ್ ನಿಧನಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಂತಾಪ - Karavali Times

728x90

8 July 2024

ಸರ್ವಧರ್ಮಗಳ ಪ್ರತಿಪಾದಕರಾಗಿದ್ದ ತಂಙಳ್ ನಿಧನ ಕರಾವಳಿ ಜನರಿಗೆ ತುಂಬಲಾರದ ನಷ್ಟ : ಸಯ್ಯಿದ್ ಕೂರತ್ ತಂಙಳ್ ನಿಧನಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಂತಾಪ

ಮಂಗಳೂರು, ಜುಲೈ 08, 2024 (ಕರಾವಳಿ ಟೈಮ್ಸ್) : ಉಳ್ಳಾಲ ಖಾಝಿ ಸಯ್ಯಿದ್ ಕೂರತ್ ತಂಙಳ್ ಅವರ ನಿಧನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತೀವ್ರ ಸಂತಾಪ ಸೂಚಿಸಿದ್ದಾರೆ. 

ಕೂರತ್ ತಂಙಳ್ ಎಂದೇ ಪ್ರಸಿದ್ಧಿ ಪಡೆದಿದ್ದ ಉಳ್ಳಾಲ ಖಾಝಿ, ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಅವರು ನಿಧನರಾಗಿರುವ ಸುದ್ದಿ ತಿಳಿದು ಅತೀವ ದುಃಖವಾಯಿತು. ಸರ್ವಧರ್ಮಗಳ ಪ್ರತಿಪಾದಕರಾಗಿದ್ದ ಪೂಜ್ಯ ತಂಙಳ್ ಅವರ ನಿಧನವು ಇಡೀ ಕರಾವಳಿ ಭಾಗದ ಜನತೆಗೆ ಅಪಾರ ನಷ್ಟವನ್ನುಂಟು ಮಾಡಿದೆ. ಪೂಜ್ಯ ತಂಙಳ್ ಅವರಿಗೆ ನನ್ನ ಹಾಗೂ ನಮ್ಮ ಸರಕಾರದ ಪರವಾಗಿ ಅಂತಿಮ ನಮನಗಳನ್ನು ಸಲ್ಲಿಸುತ್ತೇನೆ. ಅವರ ಅಪಾರ ಅನುಯಾಯಿಗಳು ಹಾಗು ಬಂಧು ಮಿತ್ರರಿಗೆ ನನ್ನ ತೀವ್ರ ಸಂತಾಪಗಳನ್ನು ಸೂಚಿಸುತ್ತೇನೆ ಎಂದು ಗುಂಡೂರಾವ್ ತಮ್ಮ ಸಂತಾಪ ಸೂಚಕ ಹೇಳಿಕೆಯಲ್ಲಿ ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಸರ್ವಧರ್ಮಗಳ ಪ್ರತಿಪಾದಕರಾಗಿದ್ದ ತಂಙಳ್ ನಿಧನ ಕರಾವಳಿ ಜನರಿಗೆ ತುಂಬಲಾರದ ನಷ್ಟ : ಸಯ್ಯಿದ್ ಕೂರತ್ ತಂಙಳ್ ನಿಧನಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಂತಾಪ Rating: 5 Reviewed By: karavali Times
Scroll to Top