ಜಾತಿವಾದಿ ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ : ದ.ಕ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದಿಂದ ಆಗ್ರಹ - Karavali Times ಜಾತಿವಾದಿ ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ : ದ.ಕ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದಿಂದ ಆಗ್ರಹ - Karavali Times

728x90

19 September 2024

ಜಾತಿವಾದಿ ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ : ದ.ಕ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದಿಂದ ಆಗ್ರಹ

ಮಂಗಳೂರು, ಸೆಪ್ಟೆಂಬರ್ 19, 2024 (ಕರಾವಳಿ ಟೈಮ್ಸ್) : ಬೆಂಗಳೂರು ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕನಾಗಿರುವ  ಮುನಿರತ್ನ, ಪರಿಶಿಷ್ಟ ಜಾತಿಯ ಬಗ್ಗೆ ನಿಂದನಾತ್ಮಕ ಪದವನ್ನು ಬಳಸಿದ್ದಲ್ಲದೇ, ಮಹಿಳೆಯರ ಬಗ್ಗೆ ಅವ್ಯಾಚ್ಯ ಶಬ್ದದಿಂದ ನಿಂದಿಸಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದರಿಂದ,  ರಾಜ್ಯದ ಅಪಾರ ದಲಿತರ ಮತ್ತು ಮಹಿಳೆಯರ ಮನಸ್ಸಿಗೆ ಅತೀವ ನೋವು ಉಂಟಾಗಿದೆ. ದೇಶ ಸ್ವಾತಂತ್ರ್ಯ ಕಂಡು 75 ವರ್ಷ ಕಳೆದರೂ ದೇಶದಲ್ಲಾಗುತ್ತಿರುವ ಮಹಿಳೆಯರ ಮತ್ತು ದಲಿತರ ಮೇಲಿನ ದೌರ್ಜನ್ಯದ ಪ್ರತೀಕವಾಗಿ ಮತ್ತು ಸಂವಿಧಾನದ ಪಾಲನೆಗಾಗಿ ಆಯ್ಕೆಯಾದ ಶಾಸಕರೇ ತನ್ನ ಲಜ್ಜೆಗೆಟ್ಟ ಜಾತಿವಾದಿ, ಮನುವಾದಿ ಪಾಲಕರಾಗಿ ಸಂವಿಧಾನ ವಿರೋಧಿಯಾಗಿ ರಾಜ್ಯವೇ ನಾಚಿಕೆ ಪಡುವಂತೆ ನಡೆದುಕೊಂಡ ಬಿಜೆಪಿ ಶಾಸಕ ಮುನಿರತ್ನರ ನೀಚ ಬುದ್ಧಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಘಟಕದ ವತಿಯಿಂದ ಜಿಲ್ಲಾಧ್ಯಕ್ಷ ದಿನೇಶ್ ಮೂಳೂರು ಅವರ ನೇತೃತ್ವದಲ್ಲಿ ಮಂಗಳೂರು ಪೆÇಲೀಸ್ ಕಮಿಷನರ್ ಅವರಿಗೆ ದೂರು ನೀಡಲಾಯಿತು. 

ಈ ಸಂದರ್ಭ ಕೆಪಿಸಿಸಿ ಸದಸ್ಯೆ ಅಪ್ಪಿ ಎಸ್, ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಟಿ. ಹೊನ್ನಯ್ಯ, ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಪ್ರೇಮನಾಥ್ ಪಿ.ಬಿ ಬಳ್ಳಾಲ್ ಬಾಗ್, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಘಟಕದ ಜಿಲ್ಲಾಧ್ಯಕ್ಷ ಜಯಕುಮಾರ್, ಮೂಡಬಿದ್ರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಗಣೇಶ್ ಪ್ರಸಾದ್, ಕಾಂಗ್ರೆಸ್ ನಾಯಕರಾದ ಪ್ರಕಾಶ್ ಕೋಡಿಕಲ್, ಇಂದಿರಾ ನಾಗೇಶ್, ಗುರುಪ್ರಸಾದ್ ಮೂಳೂರು, ಅಭಿಷೇಕ್, ಬಾಬು ಅಳಿಯೂರು ಮೊದಲಾದವರು ಉಪಸ್ಥಿತರಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಜಾತಿವಾದಿ ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ : ದ.ಕ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದಿಂದ ಆಗ್ರಹ Rating: 5 Reviewed By: karavali Times
Scroll to Top