ಸೆಪ್ಟೆಂಬರ್ 23 ರಂದು ಪುತ್ತೂರು ಅಂಚೆ ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್ - Karavali Times ಸೆಪ್ಟೆಂಬರ್ 23 ರಂದು ಪುತ್ತೂರು ಅಂಚೆ ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್ - Karavali Times

728x90

15 September 2024

ಸೆಪ್ಟೆಂಬರ್ 23 ರಂದು ಪುತ್ತೂರು ಅಂಚೆ ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್

ಪುತ್ತೂರು, ಸೆಪ್ಟೆಂಬರ್ 15, 2024 (ಕರಾವಳಿ ಟೈಮ್ಸ್) : ಪುತ್ತೂರು ಅಂಚೆ ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್ ಸೆಪ್ಟೆಂಬರ್ 23 ರಂದು ಅಪರಾಹ್ನ 3 ಗಂಟೆಗೆ ಪುತ್ತೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿಯಲ್ಲಿ  ನಡೆಯಲಿದೆ.

ಈ ಅದಾಲತ್ತಿನಲ್ಲಿ ಪುತ್ತೂರು, ಕಡಬ, ಸುಳ್ಯ, ಬಂಟ್ವಾಳ, ಮೂಡಬಿದ್ರೆ, ಬೆಳ್ತಂಗಡಿ, ಕಾರ್ಕಳ ಹಾಗೂ ಹೆಬ್ರಿ  ತಾಲೂಕುಗಳ ವ್ಯಾಪ್ತಿಯ ಅಂಚೆ ಸೇವೆಗೆ ಸಂಬಂಧಪಟ್ಟ ಎಲ್ಲಾ ರೀತಿಯ ಸಾರ್ವಜನಿಕ ಕುಂದು ಕೊರತೆಗಳನ್ನು ತಕರಾರುಗಳನ್ನು ಪರಶೀಲಿಸಲಾಗುವುದು.

ಸಾರ್ವಜನಿಕರು ಪುತ್ತೂರು ವಿಭಾಗಕ್ಕೆ ಸಂಬಂಧಪಟ್ಟ ದೂರುಗಳನ್ನು ಪತ್ರ ಮುಖೇನ, ಅಂಚೆ ಅದಾಲತ್  ತಲೆಬರಹದಡಿ ಸೆ 20ರೊಳಗೆ ಹಿರಿಯ ಅಂಚೆ ಅಧೀಕ್ಷಕರು, ಪುತ್ತೂರು ವಿಭಾಗ, ಪುತ್ತೂರು-574201 ವಿಳಾಸಕ್ಕೆ  ಕಳುಹಿಸಬಹುದು. ಅಥವಾ ಅದೇ ದಿನ ಅಪರಾಹ್ನ 3 ಗಂಟೆಯೊಳಗೆ ದೂರವಾಣಿ ಸಂಖ್ಯೆ 08251-230201, 230295ಕ್ಕೆ ನೇರವಾಗಿಯೂ ಸಂಪರ್ಕಿಸಬಹುದು. ತಮ್ಮ ದೂರುಗಳನ್ನು ಇಮೇಲ್ doputtur.ka@indiapost.gov.in ಮೂಲಕವೂ ಅದಾಲತ್ತಿಗೆ ಮೊದಲು ತಲುಪುವಂತೆ  ಕಳುಹಿಸಬಹುದು. ಪುತ್ತೂರು ಅಂಚೆ ವಿಭಾಗಕ್ಕೆ ಸಂಬಂಧಿಸಿದ ದೂರುಗಳನ್ನು ಮಾತ್ರ ಪರಿಗಣಿಸಲಾಗುವುದು ಎಂದು ಪುತ್ತೂರು ಅಂಚೆ ವಿಭಾಗದ ಹಿರಿಯ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.



  • Blogger Comments
  • Facebook Comments

0 comments:

Post a Comment

Item Reviewed: ಸೆಪ್ಟೆಂಬರ್ 23 ರಂದು ಪುತ್ತೂರು ಅಂಚೆ ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್ Rating: 5 Reviewed By: karavali Times
Scroll to Top