ಸಾರ್ವಜನಿಕರಿಗೆ ತೊಂದರೆಯಾಗುವಂತೆ ರಸ್ತೆಗೆ ಬೇಲಿ ಹಾಕಿದ ತಾ.ಪಂ. ಅಧಿಕಾರಿಗಳನ್ನು ಝಾಡಿಸಿದ ಶಾಸಕ ರಾಜೇಶ್ ನಾಯಕ್ - Karavali Times ಸಾರ್ವಜನಿಕರಿಗೆ ತೊಂದರೆಯಾಗುವಂತೆ ರಸ್ತೆಗೆ ಬೇಲಿ ಹಾಕಿದ ತಾ.ಪಂ. ಅಧಿಕಾರಿಗಳನ್ನು ಝಾಡಿಸಿದ ಶಾಸಕ ರಾಜೇಶ್ ನಾಯಕ್ - Karavali Times

728x90

12 February 2025

ಸಾರ್ವಜನಿಕರಿಗೆ ತೊಂದರೆಯಾಗುವಂತೆ ರಸ್ತೆಗೆ ಬೇಲಿ ಹಾಕಿದ ತಾ.ಪಂ. ಅಧಿಕಾರಿಗಳನ್ನು ಝಾಡಿಸಿದ ಶಾಸಕ ರಾಜೇಶ್ ನಾಯಕ್

 ಬಂಟ್ವಾಳ, ಫೆಬ್ರವರಿ 12, 2025 (ಕರಾವಳಿ ಟೈಮ್ಸ್) : ಇಲ್ಲಿನ ತಾಲೂಕು ಪಂಚಾಯತ್ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಅವರು ತಾಲೂಕು ಪಂಚಾಯತ್ ಕಚೇರಿಗೆ ಬುಧವಾರ ಹಠಾತ್ ಬೇಟಿ ನೀಡಿ   ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

   ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ರಸ್ತೆ ಸಹಿತ ಜಾಗಕ್ಕೆ ಕಬ್ಬಿಣದ ಬೇಲಿ ಹಾಕಿರುವ ಕ್ರಮದ ಬಗ್ಗೆ ಅಧಿಕಾರಿ ವರ್ಗವನ್ನು ಪ್ರಶ್ನಿಸಿದರು. ಸರಕಾರಿ ಕಚೇರಿ ಹಾಗೂ ಇತರ ಕಚೇರಿಗಳಿಗೆ ಬರುವ ಸಾರ್ವಜನಿಕರು ತಮ್ಮ ವಾಹನಗಳನ್ನು ಎಲ್ಲಿ ನಿಲ್ಲಿಸಬೇಕು, ಮತ್ತು ಅಂಬೇಡ್ಕರ್ ಭವನದಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಬರುವ ವಾಹನಗಳು ಎಲ್ಲಿ ಪಾರ್ಕ್ ಮಾಡಬೇಕು ಎಂದು ಅಧಿಕಾರಿಗಳಲ್ಲಿ ಶಾಸಕರು ಪ್ರಶ್ನಿಸಿದರು.

   ಸರಕಾರಿ ಜಾಗದಲ್ಲಿ ತಮ್ಮ ಸ್ವಂತ ಜಾಗದಂತೆ ಬೇಲಿ ಹಾಕಲು ನಿಮಗೆ ಅಧಿಕಾರ ನೀಡಿದವರು ಯಾರು ಎಂದು ಶಾಸಕರು ಇದೇ ವೇಳೆ ಪ್ರಶ್ನಿಸಿದರು. 

ತಾಲೂಕು ಪಂಚಾಯತ್  ಕಾರ್ಯ ನಿರ್ವಹಣಾಧಿಕಾರಿ ಸಚಿನ್ ಕುಮಾರ್ ಅವರು ರಜೆಯಲ್ಲಿ ಇದ್ದ ಕಾರಣ ದೂರವಾಣಿ ಮೂಲಕ ಅವರನ್ನು ಸಂಪರ್ಕಿಸಿ ಬೇಲಿ ವಿಚಾರಕ್ಕೆ ಸಂಬಂಧಿಸಿದಂತೆ ತಕ್ಷಣ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಶಾಸಕರು ಸೂಚಿಸಿದ್ದಾರೆ. 

     ‌‌‌ಈ ಸಂದರ್ಭ ಸ್ಥಳದಲ್ಲಿದ್ದ ಸಾರ್ಜನಿಕರು ಅಧಿಕಾರಿಗಳ ಉಡಾಫೆ ಹಾಗೂ ಬೇಜವಾಬ್ದಾರಿ ವರ್ತನೆ ಬಗ್ಗೆ ಶಾಸಕರಿಗೆ ದೂರಿತ್ತರು.  ಜಿ ಪಂ ಮಾಜಿ ಸದಸ್ಯ ತುಂಗಪ್ಪ ಬಂಗೇರ,   ನ್ಯಾಯವಾದಿಗಳಾದ ಅಶ್ವಥ್, ಹಾತಿಂ ಅಹ್ಮದ್, ಪ್ರಮುಖ ಡೊಂಬಯ್ಯ ಅರಳ ಮೊದಲಾದವರು ಜೊತೆಗಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಸಾರ್ವಜನಿಕರಿಗೆ ತೊಂದರೆಯಾಗುವಂತೆ ರಸ್ತೆಗೆ ಬೇಲಿ ಹಾಕಿದ ತಾ.ಪಂ. ಅಧಿಕಾರಿಗಳನ್ನು ಝಾಡಿಸಿದ ಶಾಸಕ ರಾಜೇಶ್ ನಾಯಕ್ Rating: 5 Reviewed By: lk
Scroll to Top