ಬಂಟ್ವಾಳ, ಫೆಬ್ರವರಿ 15, 2025 (ಕರಾವಳಿ ಟೈಮ್ಸ್) : ಭರತ ಖಂಡದ ಧಾರ್ಮಿಕ ರಾಯಾಭಾರಿ ಎಂದೇ ಹೆಸರಾಗಿದ್ದ ಸಂತ ಶ್ರೀ ಸೇವಾಲಾಲ್ ಮಹಾರಾಜರು ಹಲವು ಪವಾಡಗಳ ಮೂಲಕ ಜನರ ಮನಗೆದ್ದವರು.ಸಂ ತ ಶ್ರೀ ಸೇವಾಲಾಲ್ ಮಹಾರಾಜರು ಬಂಜಾರ ಸಮುದಾಯದ ಆರಾಧ್ಯ ದೈವ ಕೂಡ ಹೌದು. ಸೇವಾಲಾಲರು ಬಂಜಾರ ಸಮುದಾಯಕ್ಕೆ ಮಾತ್ರ ಸೇವೆ ಮಾಡದೆ ಇತರರಿಗೆ ಸೇವೆ ಸಲ್ಲಿಸುತ್ತ ಸೇವಕರಾಗಿದ್ದರು ಎಂದು ಬಂಟ್ವಾಳ ತಾಲೂಕು ಕಚೇರಿ ಚುನಾವಣಾ ಉಪತಹಶೀಲ್ದಾರ್ ನವೀನ್ ಕುಮಾರ್ ಬೆಂಜನಪದವು ಹೇಳಿದರು.
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಬಿ.ಸಿ.ರೋಡಿನ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಶನಿವಾರ ನಡೆದ ಸಂತ ಶ್ರೀ ಸೇವಾಲಾಲ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಆಹಾರ ಶಿರಸ್ತೇದಾರ್ ಶಿವಪ್ರಸಾದ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್,
ಸಮಾಜ ಬಾಂಧವ ಕಾರ್ಯಕಾರಿ ಸಮಿತಿ ಸದಸ್ಯರಾದ ಕರಿಬಸಪ್ಪ ನಾಯಕ್, ತಾಲೂಕು ಕಚೇರಿ ಸಿಬ್ಬಂದಿಗಳು ಮತ್ತು ಗ್ರಾಮಸಹಾಯಕರು ಉಪಸ್ಥಿತರಿದ್ದರು.
0 comments:
Post a Comment