ಬಂಟ್ವಾಳ, ಫೆಬ್ರವರಿ 01, 2025 (ಕರಾವಳಿ ಟೈಮ್ಸ್) : ಅಚಲ ಕಾಯಕನಿಷ್ಠರಾಗಿದ್ದ ಮಡಿವಾಳ ಮಾಚಿದೇವ ಅವರು ವಚನ ಸಾಹಿತ್ಯ ಮತ್ತು ಧರ್ಮದ ಸಂರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅವರ ವಚನಗಳ ಸಂದೇಶದಂತೆ ಇಂದು ಮನಗಳಲ್ಲಿರುವ ಕೊಳೆಯನ್ನು ತೊಳೆಯುವ ಅನಿವಾರ್ಯತೆ ಇದೆ ಎಂದು ಬಂಟ್ವಾಳ ತಹಶೀಲ್ದಾರ್ ಡಿ ಅರ್ಚನಾ ಭಟ್ ಹೇಳಿದರು.
ಬಿ ಸಿ ರೋಡಿನ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಶನಿವಾರ ನಡೆದ ಬಂಟ್ವಾಳ ತಾಲೂಕು ಮಟ್ಟದ ಮಡಿವಾಳ ಮಾಚಿದೇವ ಜಯಂತಿ ಆಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಈ ಸಂದರ್ಭ ಕೇಂದ್ರ ಸ್ಥಾನೀಯ ಉಪತಹಶೀಲ್ದಾರ್ ನರೇಂದ್ರನಾಥ ಮಿತ್ತೂರು, ತಾಲೂಕು ಕಛೇರಿ ಸಿಬ್ಬಂದಿ, ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಭಾಗವಹಿಸಿದ್ದರು.
0 comments:
Post a Comment