ಮಂಗಳೂರು, ಮಾರ್ಚ್ 08, 2025 (ಕರಾವಳಿ ಟೈಮ್ಸ್) : ಜಿಲ್ಲಾ ಕಾಂಗ್ರೆಸ್ ವಕ್ತಾರ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್ (60) ಅವರು ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೂರು ಬಾರಿ ಕಾರ್ಪೊರೇಟರ್ ಆಗಿ ಆಯ್ಕೆಯಾಗಿದ್ದ ಅವರು ಒಂದು ಅವಧಿಗೆ ಉಪ ಮೇಯರ್ ಆಗಿ ಕಾರ್ಯನಿರ್ವಹಿಸಿದ್ದರು. ಇವರ ನಿಧನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ತೀವ್ರ ಸಂತಾಪ ಸೂಚಿಸಿದೆ. ಮುಹಮ್ಮದ್ ಕುಂಜತ್ತಬೈಲ್ ಅವರ ಅಕಾಲಿಕ ನಿಧನದಿಂದ ಜಿಲ್ಲಾ ಕಾಂಗ್ರೆಸ್ ಸಮಿತಿ ಆಘಾತಕ್ಕೊಳಗಾಗಿದೆ. ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದ್ದರು. ಜನಪರ, ಜೀವಪರ ಚಳವಳಿಗಳಲ್ಲಿ ಭಾಗಿಯಾಗುತ್ತಾ ಜನಸಾಮಾನ್ಯರ ಧ್ವನಿಯಾಗಿದ್ದರು. ರಾಜಕೀಯದ ಜೊತೆಗೆ ಸಾಮಾಜಿಕ ಸೇವೆಯೂ ಅನುಪಮವಾದುದು. ಭ್ರಷ್ಟಾಚಾರ ರಹಿತ ನಾಯಕರಾಗಿದ್ದ ಅವರ ಸಾರ್ಥಕ ಬದುಕು ಆದರ್ಶಪ್ರಾಯ. ಅವರ ಅಗಲಿಕೆ ಜಿಲ್ಲಾ ಕಾಂಗ್ರೆಸ್ ಗೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ, ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯಿಲಿ, ಕೇಂದ್ರದ ಮಾಜಿ ಸಚಿವ ಬಿ ಜನಾರ್ದನ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್, ರಾಜ್ಯಸಭಾ ಮಾಜಿ ಸದಸ್ಯ ಬಿ ಇಬ್ರಾಹೀಂ, ಮಾಜಿ ಸಚಿವರಾದ ಬಿ ರಮಾನಾಥ ರೈ, ಅಭಯಚಂದ್ರ ಜೈನ್, ಗಂಗಾಧರ್ ಗೌಡ, ಶಾಸಕರಾದ ಅಶೋಕ್ ಕುಮಾರ್ ರೈ, ಐವನ್ ಡಿಸೋಜ, ಮಾಜಿ ಶಾಸಕರಾದ ವಿಜಯ ಕುಮಾರ್ ಶೆಟ್ಟಿ, ಎನ್.ಎಂ. ಅಡ್ಯಂತಾಯ, ಮೊಹಮ್ಮದ್ ಮಸೂದ್, ಶಕುಂತಲಾ ಶೆಟ್ಟಿ, ಜೆ.ಆರ್. ಲೋಬೊ, ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್, ಪದ್ಮರಾಜ್ ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಂ.ಎಸ್. ಮೊಹಮ್ಮದ್, ಜಿ.ಎ. ಬಾವ, ಮಿಥುನ್ ರೈ, ರಕ್ಷಿತ್ ಶಿವರಾಂ, ಇನಾಯತ್ ಅಲಿ, ಟಿ.ಎಂ. ಶಹೀದ್, ಲಾವಣ್ಯ ಬಳ್ಳಾಲ್, ಸದಸ್ಯರಾದ ಪಿಯೂಸ್ ಎಲ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪ್ರಮುಖರಾದ ಹಾಜಿ ಇಬ್ರಾಹಿಂ ಕೋಡಿಜಾಲ್, ಹಾಜಿ ಬಿ.ಎಚ್. ಖಾದರ್, ಬಿ.ಎಂ. ಅಬ್ಬಾಸ್ ಅಲಿ, ಶಶಿಧರ್ ಹೆಗ್ಡೆ, ಹಾಜಿ ಕಣಚೂರು ಯು.ಕೆ. ಮೋನು, ಸುರೇಶ್ ಬಳ್ಳಾಲ್, ಸದಾಶಿವ್ ಉಳ್ಳಾಲ್, ಕೆ. ಹರಿನಾಥ್, ಬಶೀರ್ ಬೈಕಂಪಾಡಿ, ಸೇಸಮ್ಮ, ಮಮತಾ ಗಟ್ಟಿ, ಜಿ. ಕೃಷ್ಣಪ್ಪ, ಭರತ್ ಮುಂಡೋಡಿ, ಹೇಮನಾಥ ಶೆಟ್ಟಿ ಕಾವು, ಅಶ್ವಿನ್ ಕುಮಾರ್ ರೈ, ಸುರೇಂದ್ರ ಕಂಬಳಿ, ಮಹಾಬಲ ಮಾರ್ಲ, ಕೆ. ಅಶ್ರಫ್, ವೆಂಕಪ್ಪ ಗೌಡ, ಮಲಾರ್ ಮೋನು, ಚಂದ್ರಹಾಸ ಕರ್ಕೇರ, ಟಿ. ಹೊನ್ನಯ್ಯ, ದೀಪಕ್ ಪೂಜಾರಿ, ಶುಭೋದಯ ಆಳ್ವ, ನೀರಜ್ ಚಂದ್ರಪಾಲ್, ವಿಕಾಸ್ ಶಟ್ಟಿ, ನಝೀರ್ ಬಜಾಲ್, ಪ್ರತಿಭಾ ಕುಳಾಯಿ, ಏರ್ ಪೆÇೀರ್ಟ್ ಖಾದರ್, ಸಂತೋಷ್ ಕುಮಾರ್ ಶೆಟ್ಟಿ, ಶಬ್ಬೀರ್ ಸಿದ್ದಕಟ್ಟೆ, ಯು.ಎಚ್. ಖಾಲಿದ್, ಪುರುರೋಷತ್ತಮ ಚಿತ್ರಾಪುರ, ಪ್ರಕಾಶ್ ಸಾಲ್ಯಾನ್, ಜೆ. ಅಬ್ದುಲ್ ಸಲೀಂ, ರಮೇಶ್ ಶೆಟ್ಟಿ ಬೋಳಿಯಾರ್, ಪ್ರಶಾಂತ್ ಕಾಜವ, ಬಾಲಕೃಷ್ಣ ಅಂಚನ್, ಚಂದ್ರಶೇಖರ್ ಭಂಡಾರಿ, ಸತೀಶ್ ಕಾಶಿಪಟ್ಣ, ನಾಗೇಶ್ ಕುಮಾರ್ ಗೌಡ, ಕೃಷ್ಣ ಪ್ರಸಾದ್ ಆಳ್ವ, ಪದ್ಮನಾಭ ಪೂಜಾರಿ, ಪಿ. ಮೋಹನ್ ಕೋಟ್ಯಾನ್, ಪ್ರವೀಣ್ ಕುಮಾರ್ ಜೈನ್, ಪಿ.ಕೆ. ಅಭಿಲಾಷ್, ಇಬ್ರಾಹಿಂ ನವಾಝ್ ಬಡಕಬೈಲು, ಶಾಲೆಟ್ ಪಿಂಟೋ, ಜೋಕಿಂ ಡಿಸೋಜಾ, ಕೆ.ಕೆ. ಶಾಹುಲ್ ಹಮೀದ್, ವಿಶ್ವಾಸ್ ಕುಮಾರ್ ದಾಸ್, ದಿನೇಶ್ ಮುಳೂರು, ನಾರಾಯಣ ನಾಯ್ಕ್, ಮನೋರಾಜ್ ರಾಜೀವ, ಲಾರೆನ್ಸ್ ಡಿ’ಸೋಜಾ, ಡಾ. ಶೇಖರ್ ಪೂಜಾರಿ, ಶುಭಾಶ್ಚಂದ್ರ ಶೆಟ್ಟಿ ಕೊಳ್ನಾಡು, ಚೇತನ್ ಬೆಂಗ್ರೆ, ಅಬೂ ಶಮೀರ್ ಫಜೀರು, ಸುದರ್ಶನ್ ಜೈನ್, ಅಲಿಸ್ಟರ್ ಡಿಕುನ್ಹ, ಉಲ್ಲಾಸ್ ಕೋಟ್ಯಾನ್, ಸುಹಾನ್ ಆಳ್ವ, ಸದಾಶಿವ ಶೆಟ್ಟಿ, ಆರ್.ಕೆ. ಪೃಥ್ವಿರಾಜ್, ವಸಂತ್ ಬೆರ್ನಾಡ್, ಫಾರೂಕ್ ಫರಂಗಿಪೇಟೆ, ಕೆ. ಅಪ್ಪಿ, ಸತೀಶ್ ಕೆಡಿಂಜೆ, ಮೋಹನ್ ಶೆಟ್ಟಿಗಾರ್, ಕೇಶವ ಗೌಡ, ಚಂದ್ರಹಾಸ ಸನೀಲ್, ಕೌಶಲ್ ಪ್ರಸಾದ್ ಶೆಟ್ಟಿ, ಭಾಸ್ಕರ್ ಕೆ, ಅಬ್ದುಲ್ ರವೂಫ್, ಅನಿಲ್ ಕುಮಾರ್, ಪ್ರವೀಣ್ ಚಂದ್ರ ಆಳ್ವ, ಲ್ಯಾನ್ಸ್ ಲಾಟ್ ಪಿಂಟೊ, ಕೇಶವ ಮರೋಳಿ, ನವೀನ್ ಡಿಸೋಜ, ಎ.ಸಿ. ವಿನಯರಾಜ್, ಜೆಸಿಂತಾ, ಸಂಶುದ್ದೀನ್ ಕುದ್ರೋಳಿ, ಲತೀಫ್ ಕಂದಕ್, ಅಶ್ರಫ್ ಬಜಾಲ್, ಝೀನತ್ ಸಂಶುದ್ದೀನ್ ಬಂದರ್, ಸತೀಶ್ ಪೆಂಗಲ್, ಹೇಮಂತ್ ಗರೋಡಿ, ಚೇತನ್ ಕುಮಾರ್, ತನ್ವೀರ್ ಶಾ, ಕಿಶೋರ್ ಶೆಟ್ಟಿ ಸಹಿತ ವಿವಿಧ ಗಣ್ಯರು ತೀವ್ರ ಸಂಪಾತ ಸೂಚಿಸಿದ್ದಾರೆ.
0 comments:
Post a Comment