![]() |
ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆದ ಚಿತ್ರ |
ಪುತ್ತೂರು, ಎಪ್ರಿಲ್ 10, 2025 (ಕರಾವಳಿ ಟೈಮ್ಸ್) : ಕಾನೂನಿಗೆ ಧಕ್ಕೆ ತರುವಂತೆ ಮಾರಕಾಯುಧವಾದ ತಲವಾರನ್ನು ಪ್ರದರ್ಶಿಸಿ, ಅದರ ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಆರೋಪಿಗಳಾದ ಪುತ್ತೂರು ತಾಲೂಕು ಕುರಿಯ ಗ್ರಾಮದ ನಿವಾಸಿ ಸುಜಿತ್ (36) ಆರ್ಯಾಪು ಗ್ರಾಮದ ನಿವಾಸಿ ಪುಟ್ಟಣ್ಣ (32) ಎಂಬವರುಗಳ ವಿರುದ್ದ ಬುಧವಾರ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅಪರಾಧ ಕ್ರಮಾಂಕ 42/2025 ಕಲಂ 25(1ಬಿ)(ಬಿ) ಆಮ್ರ್ಸ್ ಆಕ್ಟ್ 1959 ಹಾಗೂ ಕಲಂ 270, 3(5) ಬಿಎನ್ಎಸ್ 2023 ರಂತೆ ಪ್ರಕರಣ ದಾಖಲಾಗಿರುತ್ತದೆ.
ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬುಧವಾರವೇ ದಸ್ತಗಿರಿ ಮಾಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
0 comments:
Post a Comment