ಬೆಳ್ತಂಗಡಿ, ಎಪ್ರಿಲ್ 12, 2025 (ಕರಾವಳಿ ಟೈಮ್ಸ್) : ಬೈಕೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಕುತ್ಲೂರು ಗ್ರಾಮದ ಪುರುಷಗುಡ್ಡೆ ಎಂಬಲ್ಲಿ ಕೊಕ್ರಾಡಿ-ನಾರಾವಿ ರಸ್ತೆಯಲ್ಲಿ ಶುಕ್ರವಾರ ಮಧ್ಯ ರಾತ್ರಿ ವೇಳೆಗೆ ಸಂಭವಿಸಿದೆ.
ಮೃತರನ್ನು ಬೈಕ್ ಸವಾರ, ಸ್ಥಳೀಯ ನಿವಾಸಿ ಪ್ರಶಾಂತ್ ಹಾಗೂ ಸಹಸವಾರ, ಬೆಳ್ಮಣ್ ನಿವಾಸಿ ದಿನೇಶ್ ಎಂದು ಹೆಸರಿಸಲಾಗಿದೆ. ಶುಕ್ರವಾರ ರಾತ್ರಿ ಸುಮಾರು 12.15 ರ ವೇಳೆಗೆ ಕೊಕ್ರಾಡಿ-ನಾರಾವಿ ರಸ್ತೆಯಲ್ಲಿ ಬರುತ್ತಿದ್ದ ಇವರು ನಿಯಂತ್ರಣ ಮೀರಿ ರಸ್ತೆಯ ಬಲಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಇಬ್ಬರು ಸವಾರರು ಕೂಡಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸೂರ್ಯ ಎಂಬವರು ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment