ಬಂಟ್ವಾಳ, ಎಪ್ರಿಲ್ 17, 2025 (ಕರಾವಳಿ ಟೈಮ್ಸ್) : ದೇವಸ್ಥಾನದ ಕಾಣಿಕೆ ಡಬ್ಬಿ ಒಡೆದು ಹಣ ಎಗರಿಸಿದ ಘಟನೆ ಮೂಡುಪಡುಕೋಡಿ ಗ್ರಾಮದ ಕುಕ್ಕೆರೋಡಿ ಶ್ರೀ ಲಕ್ಷ್ಮಿ ವಿಷ್ಣುಮೂರ್ತಿ ಜಲದುರ್ಗೆ ದೇವಸ್ಥಾನದಲ್ಲಿ ನಡೆದಿದ್ದು ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ದೇವಸ್ಥಾನದ ಕಾರ್ಯಾಧ್ಯಕ್ಷ ಸುಧೀಂದ್ರ ಶೆಟ್ಟಿ ಅವರು ಪೊಲೀಸರಿಗೆ ದೂರು ನೀಡಿದ್ದು, ಇಲ್ಲಿನ ದೇವಸ್ಥಾನದ ಮುಂಭಾಗ ರಸ್ತೆ ಬದಿಯಲ್ಲಿ ಅಳವಡಿಸಲಾಗಿರುವ ಕಾಣಿಕೆ ಡಬ್ಬಿಯಲ್ಲಿನ ಹಣವನ್ನು ಪ್ರತಿ ತಿಂಗಳ ಸಂಕ್ರಮಣದಂದು ನಡೆಯುವ ಪೂಜೆಗೆ ಬಳಸಲಾಗುತ್ತಿತ್ತು. ಪ್ರತಿ ತಿಂಗಳು ಈ ಕಾಣಿಕೆ ಡಬ್ಬಿಯಲ್ಲಿ ಸುಮಾರು 5 ಸಾವಿರ ರೂಪಾಯಿ ಸಂಗ್ರಹವಾಗುತ್ತಿತ್ತು. ಈ ತಿಂಗಳ ಪೂಜೆಯ ಸಮಯದಲ್ಲಿ ದೇವಸ್ಥಾನದ ಮುಂಭಾಗದ ಕಾಣಿಕೆ ಡಬ್ಬಿಯನ್ನು ಯಾರೋ ಕಳ್ಳರು ಚಿಲಕದ ಪಿನ್ ತೆಗೆದು ಅದಲ್ಲಿನ ಚಿಲ್ಲರೆ ಹಣವನ್ನು ಹಾಗೇ ಬಿಟ್ಟು ದೊಡ್ಡ ಮೊತ್ತವನ್ನು ಎಗರಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
0 comments:
Post a Comment